Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.