Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ