Muda case DCM DK Shivakumar press meet in Bengaluru

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ರಾಮನಗರ: ಕೇಂದ್ರ ಸಚಿವ ಅಮಿತ್ ಶಾ ಅವರು ಕಾಶ್ಮೀರದಲ್ಲಿ ನಮ್ಮ ಯೋಜನೆಯನ್ನೇ ಘೋಷಿಸುವ ಮೂಲಕ, ನಮ್ಮ ಸರ್ಕಾರದ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಕನಕಪುರದ ಹಾರೋಬೆಲೆಯಲ್ಲಿ ಆರ್ಕಾವತಿ ಜಲಾಶಯ ಬಲದಂಡೆ ಏತನೀರಾವರಿ ಯೋಜನೆಯ ಪುನಶ್ವೇತನ ಕಾಮಗಾರಿಯ ಪರೀಕ್ಷಾರ್ಥ ಚಾಲನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಕರಣೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕುಟುಕಿದರು.

ನಮ್ಮ ಸರ್ಕಾರದಲ್ಲಿ ಈಗ ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಅದನ್ನೇ ನೋಡಿಕೊಂಡು ಅಮಿತ್ ಶಾ ಅವರು ಕಾಶ್ಮೀರದಲ್ಲಿ ಮಹಿಳೆಯರಿಗೆ 1.5 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ನಾವು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆಂದು ಹೇಳಿದಾಗ ಬಿಟ್ಟಿ ಯೋಜನೆ, ರಾಜ್ಯ ದಿವಾಳಿ ಆಗುತ್ತದೆಂದು ಬಿಜೆಪಿಯವರು ಬೊಬ್ಬಿರಿದಿದ್ದರು. ಈಗ ನೋಡಿದರೆ ಕಾಶ್ಮೀರದಲ್ಲಿ ಅಮಿತ್ ಶಾ ಅವರೇ 1500 ರೂಪಾಯಿ ಕೊಡುವುದಾಗಿ ಬೋರ್ಡ್ ಹಿಡಿಯುತ್ತಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ನಮ್ಮ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಬಿಜೆಪಿಗೆ ಕುಟುಕಿದರು.

ಇದೇವೇಳೆ ಎತ್ತಿನಹೊಳೆ ಯೋಜನೆ ಯಶಸ್ವಿ ಅನುಷ್ಠಾನ ವಿಚಾರವಾಗಿ ಮಾತನಾಡಿದ ಅವರು, ಇದು ಸಾಧ್ಯವೇ ಎಂದು ನಮ್ಮ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಅವರಿಗೆಲ್ಲಾ ಉತ್ತರವೆಂಬಂತೆ ನಾವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದೇವೆ.

ಇದನ್ನೂ ಓದಿ: Vijayapur: ರಥದ ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ಇನ್ನು ಅಲಮಟ್ಟಿ ಅಣೆಕಟ್ಟಿನ ಕ್ರಸ್ಟ್ ಗೇಟ್ ಮುರಿದು ಹೋದಾಗ ನನ್ನ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಒಂದೇ ವಾರದಲ್ಲಿ ಅದನ್ನು ಸರಿ ಮಾಡಿಸಿದ್ದೇವೆ. ಇನ್ನು ಮೇಕೆದಾಟು ಸಹ ಆಗಬೇಕಿದೆ. ಈ ವಿಚಾರವಾಗಿ ನಾವು ಗಮನಹರಿಸುತ್ತೇವೆ ಎಂದು ಭರವಸೆ ನೀಡಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು