Muda case DCM DK Shivakumar press meet in Bengaluru

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ರಾಮನಗರ: ಕೇಂದ್ರ ಸಚಿವ ಅಮಿತ್ ಶಾ ಅವರು ಕಾಶ್ಮೀರದಲ್ಲಿ ನಮ್ಮ ಯೋಜನೆಯನ್ನೇ ಘೋಷಿಸುವ ಮೂಲಕ, ನಮ್ಮ ಸರ್ಕಾರದ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಕನಕಪುರದ ಹಾರೋಬೆಲೆಯಲ್ಲಿ ಆರ್ಕಾವತಿ ಜಲಾಶಯ ಬಲದಂಡೆ ಏತನೀರಾವರಿ ಯೋಜನೆಯ ಪುನಶ್ವೇತನ ಕಾಮಗಾರಿಯ ಪರೀಕ್ಷಾರ್ಥ ಚಾಲನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಕರಣೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕುಟುಕಿದರು.

ನಮ್ಮ ಸರ್ಕಾರದಲ್ಲಿ ಈಗ ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಅದನ್ನೇ ನೋಡಿಕೊಂಡು ಅಮಿತ್ ಶಾ ಅವರು ಕಾಶ್ಮೀರದಲ್ಲಿ ಮಹಿಳೆಯರಿಗೆ 1.5 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ನಾವು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆಂದು ಹೇಳಿದಾಗ ಬಿಟ್ಟಿ ಯೋಜನೆ, ರಾಜ್ಯ ದಿವಾಳಿ ಆಗುತ್ತದೆಂದು ಬಿಜೆಪಿಯವರು ಬೊಬ್ಬಿರಿದಿದ್ದರು. ಈಗ ನೋಡಿದರೆ ಕಾಶ್ಮೀರದಲ್ಲಿ ಅಮಿತ್ ಶಾ ಅವರೇ 1500 ರೂಪಾಯಿ ಕೊಡುವುದಾಗಿ ಬೋರ್ಡ್ ಹಿಡಿಯುತ್ತಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ನಮ್ಮ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಬಿಜೆಪಿಗೆ ಕುಟುಕಿದರು.

ಇದೇವೇಳೆ ಎತ್ತಿನಹೊಳೆ ಯೋಜನೆ ಯಶಸ್ವಿ ಅನುಷ್ಠಾನ ವಿಚಾರವಾಗಿ ಮಾತನಾಡಿದ ಅವರು, ಇದು ಸಾಧ್ಯವೇ ಎಂದು ನಮ್ಮ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಅವರಿಗೆಲ್ಲಾ ಉತ್ತರವೆಂಬಂತೆ ನಾವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದೇವೆ.

ಇದನ್ನೂ ಓದಿ: Vijayapur: ರಥದ ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ಇನ್ನು ಅಲಮಟ್ಟಿ ಅಣೆಕಟ್ಟಿನ ಕ್ರಸ್ಟ್ ಗೇಟ್ ಮುರಿದು ಹೋದಾಗ ನನ್ನ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಒಂದೇ ವಾರದಲ್ಲಿ ಅದನ್ನು ಸರಿ ಮಾಡಿಸಿದ್ದೇವೆ. ಇನ್ನು ಮೇಕೆದಾಟು ಸಹ ಆಗಬೇಕಿದೆ. ಈ ವಿಚಾರವಾಗಿ ನಾವು ಗಮನಹರಿಸುತ್ತೇವೆ ಎಂದು ಭರವಸೆ ನೀಡಿದರು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ