Muda case DCM DK Shivakumar press meet in Bengaluru

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ರಾಮನಗರ: ಕೇಂದ್ರ ಸಚಿವ ಅಮಿತ್ ಶಾ ಅವರು ಕಾಶ್ಮೀರದಲ್ಲಿ ನಮ್ಮ ಯೋಜನೆಯನ್ನೇ ಘೋಷಿಸುವ ಮೂಲಕ, ನಮ್ಮ ಸರ್ಕಾರದ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಕನಕಪುರದ ಹಾರೋಬೆಲೆಯಲ್ಲಿ ಆರ್ಕಾವತಿ ಜಲಾಶಯ ಬಲದಂಡೆ ಏತನೀರಾವರಿ ಯೋಜನೆಯ ಪುನಶ್ವೇತನ ಕಾಮಗಾರಿಯ ಪರೀಕ್ಷಾರ್ಥ ಚಾಲನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಕರಣೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕುಟುಕಿದರು.

ನಮ್ಮ ಸರ್ಕಾರದಲ್ಲಿ ಈಗ ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಅದನ್ನೇ ನೋಡಿಕೊಂಡು ಅಮಿತ್ ಶಾ ಅವರು ಕಾಶ್ಮೀರದಲ್ಲಿ ಮಹಿಳೆಯರಿಗೆ 1.5 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ನಾವು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆಂದು ಹೇಳಿದಾಗ ಬಿಟ್ಟಿ ಯೋಜನೆ, ರಾಜ್ಯ ದಿವಾಳಿ ಆಗುತ್ತದೆಂದು ಬಿಜೆಪಿಯವರು ಬೊಬ್ಬಿರಿದಿದ್ದರು. ಈಗ ನೋಡಿದರೆ ಕಾಶ್ಮೀರದಲ್ಲಿ ಅಮಿತ್ ಶಾ ಅವರೇ 1500 ರೂಪಾಯಿ ಕೊಡುವುದಾಗಿ ಬೋರ್ಡ್ ಹಿಡಿಯುತ್ತಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ನಮ್ಮ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಬಿಜೆಪಿಗೆ ಕುಟುಕಿದರು.

ಇದೇವೇಳೆ ಎತ್ತಿನಹೊಳೆ ಯೋಜನೆ ಯಶಸ್ವಿ ಅನುಷ್ಠಾನ ವಿಚಾರವಾಗಿ ಮಾತನಾಡಿದ ಅವರು, ಇದು ಸಾಧ್ಯವೇ ಎಂದು ನಮ್ಮ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಅವರಿಗೆಲ್ಲಾ ಉತ್ತರವೆಂಬಂತೆ ನಾವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದೇವೆ.

ಇದನ್ನೂ ಓದಿ: Vijayapur: ರಥದ ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ಇನ್ನು ಅಲಮಟ್ಟಿ ಅಣೆಕಟ್ಟಿನ ಕ್ರಸ್ಟ್ ಗೇಟ್ ಮುರಿದು ಹೋದಾಗ ನನ್ನ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಒಂದೇ ವಾರದಲ್ಲಿ ಅದನ್ನು ಸರಿ ಮಾಡಿಸಿದ್ದೇವೆ. ಇನ್ನು ಮೇಕೆದಾಟು ಸಹ ಆಗಬೇಕಿದೆ. ಈ ವಿಚಾರವಾಗಿ ನಾವು ಗಮನಹರಿಸುತ್ತೇವೆ ಎಂದು ಭರವಸೆ ನೀಡಿದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ