BJP letter to police to prevent defamation of portraits

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

Ad
Ad

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ

Ad
Ad

ಮುದ್ದೇಬಿಹಾಳ : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಚಾಟಿಸಿದ್ದನ್ನು ವಿರೋಧಿಸುವ ನೆಪದಲ್ಲಿ ಪ್ರತಿಭಟನಾ ರ‍್ಯಾಲಿ ನೆಪವಾಗಿಟ್ಟುಕೊಂಡು ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಅಪಮಾನಿಸುವುದನ್ನು ತಡೆಗಟ್ಟುವಂತೆ ಇಲ್ಲಿನ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಪೊಲೀಸ್ ಠಾಣೆಗೆ ಭಾನುವಾರ ಪತ್ರ ನೀಡಿದ್ದಾರೆ.

ಈ ಕುರಿತು ಸಿಪಿಐಗೆ ಬರೆದಿರುವ ಪತ್ರದಲ್ಲಿ ಏ.7 ರಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹಾಗೂ ಕಾಂಗ್ರೆಸ್‌ನ ಕೆಲವು ಮುಖಂಡರಗಳ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಿ ಬಿಜೆಪಿ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಭಾವಚಿತ್ರಗಳಿಗೆ ಅಪಮಾನಿಸುವ ಉದ್ದೇಶವಿದ್ದು ಜಿಲ್ಲೆಯ ಬೇರೆ ಕಡೆಯಿಂದ ಜನರನ್ನು ಕರೆಯಿಸಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಅಪಮಾನಿಸಿ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಕಂಡು ಬಂದಿದ್ದು ಕೂಡಲೇ ಇಂತಹ ಬೆಳವಣಿಗೆಯನ್ನು ಪೊಲೀಸರು ತಡೆಗಟ್ಟಬೇಕುರ‍್ಯಾಲಿಯಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳನ್ನು ಬಳಸುವುದಕ್ಕೆ ನಿರ್ಬಂಧಿಸಬೇಕು ಎಂದು ತಿಳಿಸಲಾಗಿದೆ.

ಬಿಜೆಪಿ ಪಕ್ಷದ ನಾಯಕರನ್ನು ಅವಮಾನಿಸುತ್ತಾ ಸಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಒಂದು ವೇಳೆ ಇದಕ್ಕೂ ಮೀರಿ ಬಿಜೆಪಿ ನಾಯಕರ ಭಾವಚಿತ್ರಗಳನ್ನು ಬಳಸಿ ಅವಮಾನಿಸಿದ್ದೇ ಆದಲ್ಲಿ ಉಗ್ರ ಪ್ರತಿರೋಧ ತೋರಬೇಕಾಗುತ್ತದೆ. ಇದರಿಂದ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿ ಶಾಂತಿಭಂಗವಾದಲ್ಲಿ ಅದಕ್ಕೆ ಪೊಲೀಸ್ ಇಲಾಖೆಯಯೇ ಹೊಣೆ ಹೊರಬೇಕಾಗುತ್ತದೆ ಎಂದು ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಸಿಪಿಐಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,