BJP MLA Arvind Bellad wrote a letter to the CM and apologized..! Appreciated by CM Siddaramaiah

ಸಿಎಂಗೆ ಪತ್ರ ಬರೆದು ಕ್ಷಮೆ ಕೋರಿದ BJP MLA..! ಮೆಚ್ಚು ವ್ಯಕ್ತಪಡಿಸಿದ CM Siddaramaiah..!

ಸಿಎಂಗೆ ಪತ್ರ ಬರೆದು ಕ್ಷಮೆ ಕೋರಿದ BJP MLA..! ಮೆಚ್ಚು ವ್ಯಕ್ತಪಡಿಸಿದ CM Siddaramaiah..!

ಬೆಂಗಳೂರು: ತಮ್ಮನ್ನು ಏಕವಚನದಲ್ಲಿ ನಿಂದಿಸಿ, ತದನಂತರ ಪತ್ರ ಬರೆದು ಸಿಎಂ ಸಿದ್ದರಾಮಯ್ಯ‌ (CM Siddaramaih) ಅವರಲ್ಲಿ ಕ್ಷಮೆಯಾಚಿಸಿದ BJP MLA ಅರವಿಂದ್ ಬೆಲ್ಲದ್ ಅವರ ನಡೆಗೆ ಸ್ವತಃ ಸಿಎಂ ಅವರೇ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು.

ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಸಿಎಂ‌ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ. ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ ಎಂದು ಶಾಸಕ‌ ಅರವಿಂದ್ ಬೆಲ್ಲದ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ‌ ಮುಕ್ತವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸ್ಥಾನದ ಕುರಿತು ಸ್ಫೋಟಕ ಬಾಂಬ್ ಸಿಡಿಸಿದ DK Suresh

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿಎಂ ಶ್ಲಾಘಿಸಿದ್ದಾರೆ.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್