BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಬೆಳಗಾವಿ : ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಬಳ್ಳಾರಿ ಯಾತ್ರೆಗೆ ಮುಂದಾಗಿದ್ದು, ಸೆಪ್ಟೆಂಬರ್‌ 17 ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ ಎಂದು ವರದಿಯಾಗಿದೆ.

ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್‌ ‘ಮೈಸೂರು ಚಲೋ’ ಪಾದಯಾತ್ರೆ ಮುಕ್ತಾಯಗೊಂಡಿರುವ ಬೆನ್ನ ಹಿಂದೆಯೇ ಕೂಡಲಸಂಗಮದಿಂದ ಬಳ್ಳಾರಿವರೆಗೂ ಬಿಜೆಪಿ‌ಯ ಅತೃಪ್ತ ನಾಯಕರು (BJP Rebel Leaders) ಪಾದಯಾತ್ರೆ ನಡೆಸುವ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಜೋರಾಗಿದೆ.

Join Our Telegram: https://t.me/dcgkannada

ಬೆಳಗಾವಿ ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ವೊಂದರಲ್ಲಿ ಭಾನುವಾರ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ ಒಟ್ಟು 12 ನಾಯಕರು ರಹಸ್ಯ ಸಭೆ ನಡೆಸಿ, ಈ ತಿರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಪಾದಯಾತ್ರೆ ವೇಳೆ ಕಾಂಗ್ರೆಸ್‌ನ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಯ ವಿರುದ್ಧ ಹೋರಾಟ ನಡೆಸಲು ಚರ್ಚಿಸಲಾಗಿದೆ. ಮುಡಾ ಹಗರಣದಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಹೊರಟಿದ್ದಾರೆ ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ರವಾನಿಸುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆಗೆ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಕಾಂಗ್ರೆಸ್‌ನ ವಾಲ್ಮೀಕಿ ನಿಗಮದ ಹಗರಣದ ವಿರುದ್ಧದ ಹೋರಾಟದ ನೆಪದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಈಗ ಬಂಡೆದಿದ್ದು, ತಮ್ಮ ಪಕ್ಷದ ನಾಯಕರಿಗೇ ಸಡ್ಡು ಹೊಡೆದಿದ್ದಾರೆ. ಪಾದಯಾತ್ರೆಗೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ ಅವರು, ಬಳ್ಳಾರಿ ಪಾದಯಾತ್ರೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿಯೇ ಬೆಳಗಾವಿಯಲ್ಲಿ ಸಭೆ ನಡೆದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರು, ಬಿಜೆಪಿಯಲ್ಲಿ 20 ಬಣಗಳಿವೆ. ಆರ್.ಅಶೋಕ್‌ ಬಣ, ವಿಜಯೇಂದ್ರ ಬಣ, ಪ್ರಹ್ಲಾದ ಜೋಶಿ ಬಣ, ಸಂತೋಷ‌ ಬಣ, ಅಶ್ವತ್ಥ ನಾರಾಯಣ ಬಣ, ಯತ್ನಾಳ-ಜಾರಕಿಹೊಳಿ ಬಣ, ಸಿ.ಟಿ.ರವಿ ಬಣ… ಹೀಗೆ ಸಾಕಷ್ಟು ಬಣಗಳಿವೆ. ಒಂದೊಂದು ಬಣವೂ ಪಾದಯಾತ್ರೆ ಮಾಡಲಿ ಎಂದು ಕುಹಕವಾಡಿದ್ದಾರೆ.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ