BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಬೆಳಗಾವಿ : ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಬಳ್ಳಾರಿ ಯಾತ್ರೆಗೆ ಮುಂದಾಗಿದ್ದು, ಸೆಪ್ಟೆಂಬರ್‌ 17 ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ ಎಂದು ವರದಿಯಾಗಿದೆ.

ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್‌ ‘ಮೈಸೂರು ಚಲೋ’ ಪಾದಯಾತ್ರೆ ಮುಕ್ತಾಯಗೊಂಡಿರುವ ಬೆನ್ನ ಹಿಂದೆಯೇ ಕೂಡಲಸಂಗಮದಿಂದ ಬಳ್ಳಾರಿವರೆಗೂ ಬಿಜೆಪಿ‌ಯ ಅತೃಪ್ತ ನಾಯಕರು (BJP Rebel Leaders) ಪಾದಯಾತ್ರೆ ನಡೆಸುವ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಜೋರಾಗಿದೆ.

Join Our Telegram: https://t.me/dcgkannada

ಬೆಳಗಾವಿ ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ವೊಂದರಲ್ಲಿ ಭಾನುವಾರ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ ಒಟ್ಟು 12 ನಾಯಕರು ರಹಸ್ಯ ಸಭೆ ನಡೆಸಿ, ಈ ತಿರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಪಾದಯಾತ್ರೆ ವೇಳೆ ಕಾಂಗ್ರೆಸ್‌ನ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಯ ವಿರುದ್ಧ ಹೋರಾಟ ನಡೆಸಲು ಚರ್ಚಿಸಲಾಗಿದೆ. ಮುಡಾ ಹಗರಣದಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಹೊರಟಿದ್ದಾರೆ ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ರವಾನಿಸುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆಗೆ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಕಾಂಗ್ರೆಸ್‌ನ ವಾಲ್ಮೀಕಿ ನಿಗಮದ ಹಗರಣದ ವಿರುದ್ಧದ ಹೋರಾಟದ ನೆಪದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಈಗ ಬಂಡೆದಿದ್ದು, ತಮ್ಮ ಪಕ್ಷದ ನಾಯಕರಿಗೇ ಸಡ್ಡು ಹೊಡೆದಿದ್ದಾರೆ. ಪಾದಯಾತ್ರೆಗೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ ಅವರು, ಬಳ್ಳಾರಿ ಪಾದಯಾತ್ರೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿಯೇ ಬೆಳಗಾವಿಯಲ್ಲಿ ಸಭೆ ನಡೆದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರು, ಬಿಜೆಪಿಯಲ್ಲಿ 20 ಬಣಗಳಿವೆ. ಆರ್.ಅಶೋಕ್‌ ಬಣ, ವಿಜಯೇಂದ್ರ ಬಣ, ಪ್ರಹ್ಲಾದ ಜೋಶಿ ಬಣ, ಸಂತೋಷ‌ ಬಣ, ಅಶ್ವತ್ಥ ನಾರಾಯಣ ಬಣ, ಯತ್ನಾಳ-ಜಾರಕಿಹೊಳಿ ಬಣ, ಸಿ.ಟಿ.ರವಿ ಬಣ… ಹೀಗೆ ಸಾಕಷ್ಟು ಬಣಗಳಿವೆ. ಒಂದೊಂದು ಬಣವೂ ಪಾದಯಾತ್ರೆ ಮಾಡಲಿ ಎಂದು ಕುಹಕವಾಡಿದ್ದಾರೆ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ