BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಬೆಳಗಾವಿ : ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಬಳ್ಳಾರಿ ಯಾತ್ರೆಗೆ ಮುಂದಾಗಿದ್ದು, ಸೆಪ್ಟೆಂಬರ್‌ 17 ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ ಎಂದು ವರದಿಯಾಗಿದೆ.

ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್‌ ‘ಮೈಸೂರು ಚಲೋ’ ಪಾದಯಾತ್ರೆ ಮುಕ್ತಾಯಗೊಂಡಿರುವ ಬೆನ್ನ ಹಿಂದೆಯೇ ಕೂಡಲಸಂಗಮದಿಂದ ಬಳ್ಳಾರಿವರೆಗೂ ಬಿಜೆಪಿ‌ಯ ಅತೃಪ್ತ ನಾಯಕರು (BJP Rebel Leaders) ಪಾದಯಾತ್ರೆ ನಡೆಸುವ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಜೋರಾಗಿದೆ.

Join Our Telegram: https://t.me/dcgkannada

ಬೆಳಗಾವಿ ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ವೊಂದರಲ್ಲಿ ಭಾನುವಾರ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ ಒಟ್ಟು 12 ನಾಯಕರು ರಹಸ್ಯ ಸಭೆ ನಡೆಸಿ, ಈ ತಿರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಪಾದಯಾತ್ರೆ ವೇಳೆ ಕಾಂಗ್ರೆಸ್‌ನ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಯ ವಿರುದ್ಧ ಹೋರಾಟ ನಡೆಸಲು ಚರ್ಚಿಸಲಾಗಿದೆ. ಮುಡಾ ಹಗರಣದಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಹೊರಟಿದ್ದಾರೆ ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ರವಾನಿಸುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆಗೆ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಕಾಂಗ್ರೆಸ್‌ನ ವಾಲ್ಮೀಕಿ ನಿಗಮದ ಹಗರಣದ ವಿರುದ್ಧದ ಹೋರಾಟದ ನೆಪದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಿಜೆಪಿಯ ಅತೃಪ್ತ ನಾಯಕರು (BJP Rebel Leaders) ಈಗ ಬಂಡೆದಿದ್ದು, ತಮ್ಮ ಪಕ್ಷದ ನಾಯಕರಿಗೇ ಸಡ್ಡು ಹೊಡೆದಿದ್ದಾರೆ. ಪಾದಯಾತ್ರೆಗೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ ಅವರು, ಬಳ್ಳಾರಿ ಪಾದಯಾತ್ರೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿಯೇ ಬೆಳಗಾವಿಯಲ್ಲಿ ಸಭೆ ನಡೆದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರು, ಬಿಜೆಪಿಯಲ್ಲಿ 20 ಬಣಗಳಿವೆ. ಆರ್.ಅಶೋಕ್‌ ಬಣ, ವಿಜಯೇಂದ್ರ ಬಣ, ಪ್ರಹ್ಲಾದ ಜೋಶಿ ಬಣ, ಸಂತೋಷ‌ ಬಣ, ಅಶ್ವತ್ಥ ನಾರಾಯಣ ಬಣ, ಯತ್ನಾಳ-ಜಾರಕಿಹೊಳಿ ಬಣ, ಸಿ.ಟಿ.ರವಿ ಬಣ… ಹೀಗೆ ಸಾಕಷ್ಟು ಬಣಗಳಿವೆ. ಒಂದೊಂದು ಬಣವೂ ಪಾದಯಾತ್ರೆ ಮಾಡಲಿ ಎಂದು ಕುಹಕವಾಡಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ