BJP Rebels Basanagouda patil yatnal vs BY Vijayendra

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ತಮ್ಮ ವಿರುದ್ಧ ಸ್ವಪಕ್ಷೀಯರಿಂದ ಬಂಡಾಯದ (BJP Rebels) ಕಹಳೆ ಮೊಳಗಿದ ಬೆನ್ನಲ್ಲೇ ಬಿ.ವೈ.ವಿಜಯೇಂದ್ರ (BY Vijayendra) ಸಂಘ ಪರಿವಾರದ ಮುಖಂಡರು ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಬೆಳಗ್ಗೆ ಚಾಮರಾಜಪೇಟೆಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕೇಂದ್ರ ಕಚೇರಿಗೆ ಸ್ವತಃ ವಿಜಯೇಂದ್ರ ತೆರಳಿದ್ದರು.

Join Our Telegram: https://t.me/dcgkannada

21ಕ್ಕೆ ಬೆಂಗಳೂರಲ್ಲೇ ವಿಜಯೇಂದ್ರ ವಿರುದ್ಧ ಅತೃಪ್ತರ ಬಂಡಾಯ (BJP Rebels) ಸಭೆ?

ಒಂದು ವೇಳೆ ಅಷ್ಟರೊಳಗಾಗಿ ಬಿಜೆಪಿಯ ವರಿಷ್ಠರು ಬ್ರೇಕ್ ಹಾಕಿದಲ್ಲಿ ಮಾತ್ರ ಸಭೆ ರದ್ದಾಗಬಹುದು ಅಥವಾ ಮುಂದೂಡಬಹುದು. ಇಲ್ಲದಿದ್ದರೆ ಸಭೆ ನಡೆಯುವುದು ನಿಶ್ಚಿತ ಎನ್ನಲಾಗಿದೆ.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕಳೆದ ಭಾನುವಾರ ಬೆಳಗಾವಿಯ ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆದ ಸಭೆಯ ಮುಂದುವರಿದ ಭಾಗವಿದು. ಈ ಸಭೆಯಲ್ಲೂ ಯತ್ನಾಳ್, ಜಾರಕಿಹೊಳಿ ಜತೆಗೆ ಅರವಿಂದ್ ಲಿಂಬಾವಳಿ, ಅಣ್ಣಾ ಸಾಹೇಬ್ ಜೊಲ್ಲೆ, ಜಿ.ಎಂ.ಸಿದ್ದೇಶ್ವರ್, ಪ್ರತಾಪ್ ಸಿಂಹ, ಕುಮಾರ್‌ ಬಂಗಾರಪ್ಪ, ಬಿ.ಪಿ.ಹರೀಷ್ ಅವರೊಂದಿಗೆ ಇತರ ಹಲವು ಮುಖಂಡರೂ ಜತೆಗೂಡುವ ನಿರೀಕ್ಷೆಯಿದೆ ಎಂದು ರಾಜಕೀಯ ಪಂಡಿತರು ಹೇಳುತ್ತಿದ್ದಾರೆ.

ಪಾದಯಾತ್ರೆ ಹೆಸರಲ್ಲಿ ಸಭೆ:

ಮೇಲ್ನೋಟಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮುಂದಿಟ್ಟುಕೊಂಡು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಈ ಸಭೆ ನಡೆಸಲಾಗುವುದು ಎಂದು ಹೇಳಲಾಗುತ್ತಿದ್ದರೂ ಇದು ವಿಜಯೇಂದ್ರ ಅವರ ನಾಯಕತ್ವಕ್ಕೆ ಸಡ್ಡು ಹೊಡೆಯುವುದೇ ಆಗಿದೆ ಎನ್ನುವುದು ಸತ್ಯ.

ಈ ಬಾರಿಯ ಸಭೆಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ತೆರಳುವ ಬಗ್ಗೆ, ವರಿಷ್ಠರ ಮೇಲೆ ಒತ್ತಡ ಹೇರುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಈಗಾಗಲೇ ಬೆಳಗಾವಿ ಸಭೆ ಬಳಿಕ ಬಿಜೆಪಿ ಪಾಳೆಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ವಿಜಯೇಂದ್ರ ಅವರು ಬುಧವಾರ ಬೆಂಗಳೂರಿನಲ್ಲಿ ಸಂಘ ಪರಿವಾರದ ಮುಖಂಡರು ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದರ ಬೆನ್ನಲ್ಲೇ ಬಂಡಾಯದ ಮತ್ತೊಂದು ಸಭೆ ನಡೆಸಲು ಮುಂದಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ವಿಜಯಪುರ: ಗ್ಯಾರಂಟಿ ಯೋಜನೆ ಮತ್ತು BPL Card ರದ್ದು ಮಾಡುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಚಿವ ಎಂ.ಬಿ
ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕಮಿಟ್ ಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ವಿಜಯಪುರದಲ್ಲಿ ಸಚಿವ ಎಂ. ಬಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸು ತಜ್ಞರು. 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟವಾಗಿ ಹೇಳಿದರು.

BPL Card ರದ್ದು:

ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲಿ ಒತ್ತಡ ಬಹಳ ಇದೆ ರಾಜ್ಯದಲ್ಲಿ ಅತಿ ಹೆಚ್ಚು 82% ಬಿಪಿಎಲ್ ಕಾರ್ಡ್. ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ ಎಂದು ಮಾಹಿತಿ ನೀಡಿದ್ದಾರೆ.

ಅನವಶ್ಯಕವಾಗಿ ಶ್ರೀಮಂತರ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ ಎಂದ ಎಂಬಿ ಪಾಟೀಲ್, ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ