BJP Rebels Basanagouda patil yatnal vs BY Vijayendra

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ತಮ್ಮ ವಿರುದ್ಧ ಸ್ವಪಕ್ಷೀಯರಿಂದ ಬಂಡಾಯದ (BJP Rebels) ಕಹಳೆ ಮೊಳಗಿದ ಬೆನ್ನಲ್ಲೇ ಬಿ.ವೈ.ವಿಜಯೇಂದ್ರ (BY Vijayendra) ಸಂಘ ಪರಿವಾರದ ಮುಖಂಡರು ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಬೆಳಗ್ಗೆ ಚಾಮರಾಜಪೇಟೆಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕೇಂದ್ರ ಕಚೇರಿಗೆ ಸ್ವತಃ ವಿಜಯೇಂದ್ರ ತೆರಳಿದ್ದರು.

Join Our Telegram: https://t.me/dcgkannada

21ಕ್ಕೆ ಬೆಂಗಳೂರಲ್ಲೇ ವಿಜಯೇಂದ್ರ ವಿರುದ್ಧ ಅತೃಪ್ತರ ಬಂಡಾಯ (BJP Rebels) ಸಭೆ?

ಒಂದು ವೇಳೆ ಅಷ್ಟರೊಳಗಾಗಿ ಬಿಜೆಪಿಯ ವರಿಷ್ಠರು ಬ್ರೇಕ್ ಹಾಕಿದಲ್ಲಿ ಮಾತ್ರ ಸಭೆ ರದ್ದಾಗಬಹುದು ಅಥವಾ ಮುಂದೂಡಬಹುದು. ಇಲ್ಲದಿದ್ದರೆ ಸಭೆ ನಡೆಯುವುದು ನಿಶ್ಚಿತ ಎನ್ನಲಾಗಿದೆ.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕಳೆದ ಭಾನುವಾರ ಬೆಳಗಾವಿಯ ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆದ ಸಭೆಯ ಮುಂದುವರಿದ ಭಾಗವಿದು. ಈ ಸಭೆಯಲ್ಲೂ ಯತ್ನಾಳ್, ಜಾರಕಿಹೊಳಿ ಜತೆಗೆ ಅರವಿಂದ್ ಲಿಂಬಾವಳಿ, ಅಣ್ಣಾ ಸಾಹೇಬ್ ಜೊಲ್ಲೆ, ಜಿ.ಎಂ.ಸಿದ್ದೇಶ್ವರ್, ಪ್ರತಾಪ್ ಸಿಂಹ, ಕುಮಾರ್‌ ಬಂಗಾರಪ್ಪ, ಬಿ.ಪಿ.ಹರೀಷ್ ಅವರೊಂದಿಗೆ ಇತರ ಹಲವು ಮುಖಂಡರೂ ಜತೆಗೂಡುವ ನಿರೀಕ್ಷೆಯಿದೆ ಎಂದು ರಾಜಕೀಯ ಪಂಡಿತರು ಹೇಳುತ್ತಿದ್ದಾರೆ.

ಪಾದಯಾತ್ರೆ ಹೆಸರಲ್ಲಿ ಸಭೆ:

ಮೇಲ್ನೋಟಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮುಂದಿಟ್ಟುಕೊಂಡು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಈ ಸಭೆ ನಡೆಸಲಾಗುವುದು ಎಂದು ಹೇಳಲಾಗುತ್ತಿದ್ದರೂ ಇದು ವಿಜಯೇಂದ್ರ ಅವರ ನಾಯಕತ್ವಕ್ಕೆ ಸಡ್ಡು ಹೊಡೆಯುವುದೇ ಆಗಿದೆ ಎನ್ನುವುದು ಸತ್ಯ.

ಈ ಬಾರಿಯ ಸಭೆಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ತೆರಳುವ ಬಗ್ಗೆ, ವರಿಷ್ಠರ ಮೇಲೆ ಒತ್ತಡ ಹೇರುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಈಗಾಗಲೇ ಬೆಳಗಾವಿ ಸಭೆ ಬಳಿಕ ಬಿಜೆಪಿ ಪಾಳೆಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ವಿಜಯೇಂದ್ರ ಅವರು ಬುಧವಾರ ಬೆಂಗಳೂರಿನಲ್ಲಿ ಸಂಘ ಪರಿವಾರದ ಮುಖಂಡರು ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದರ ಬೆನ್ನಲ್ಲೇ ಬಂಡಾಯದ ಮತ್ತೊಂದು ಸಭೆ ನಡೆಸಲು ಮುಂದಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ವಿಜಯಪುರ: ಗ್ಯಾರಂಟಿ ಯೋಜನೆ ಮತ್ತು BPL Card ರದ್ದು ಮಾಡುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಚಿವ ಎಂ.ಬಿ
ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕಮಿಟ್ ಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ವಿಜಯಪುರದಲ್ಲಿ ಸಚಿವ ಎಂ. ಬಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸು ತಜ್ಞರು. 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟವಾಗಿ ಹೇಳಿದರು.

BPL Card ರದ್ದು:

ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲಿ ಒತ್ತಡ ಬಹಳ ಇದೆ ರಾಜ್ಯದಲ್ಲಿ ಅತಿ ಹೆಚ್ಚು 82% ಬಿಪಿಎಲ್ ಕಾರ್ಡ್. ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ ಎಂದು ಮಾಹಿತಿ ನೀಡಿದ್ದಾರೆ.

ಅನವಶ್ಯಕವಾಗಿ ಶ್ರೀಮಂತರ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ ಎಂದ ಎಂಬಿ ಪಾಟೀಲ್, ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ