BJP Rebels Basanagouda patil yatnal vs BY Vijayendra

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ತಮ್ಮ ವಿರುದ್ಧ ಸ್ವಪಕ್ಷೀಯರಿಂದ ಬಂಡಾಯದ (BJP Rebels) ಕಹಳೆ ಮೊಳಗಿದ ಬೆನ್ನಲ್ಲೇ ಬಿ.ವೈ.ವಿಜಯೇಂದ್ರ (BY Vijayendra) ಸಂಘ ಪರಿವಾರದ ಮುಖಂಡರು ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಬೆಳಗ್ಗೆ ಚಾಮರಾಜಪೇಟೆಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕೇಂದ್ರ ಕಚೇರಿಗೆ ಸ್ವತಃ ವಿಜಯೇಂದ್ರ ತೆರಳಿದ್ದರು.

Join Our Telegram: https://t.me/dcgkannada

21ಕ್ಕೆ ಬೆಂಗಳೂರಲ್ಲೇ ವಿಜಯೇಂದ್ರ ವಿರುದ್ಧ ಅತೃಪ್ತರ ಬಂಡಾಯ (BJP Rebels) ಸಭೆ?

ಒಂದು ವೇಳೆ ಅಷ್ಟರೊಳಗಾಗಿ ಬಿಜೆಪಿಯ ವರಿಷ್ಠರು ಬ್ರೇಕ್ ಹಾಕಿದಲ್ಲಿ ಮಾತ್ರ ಸಭೆ ರದ್ದಾಗಬಹುದು ಅಥವಾ ಮುಂದೂಡಬಹುದು. ಇಲ್ಲದಿದ್ದರೆ ಸಭೆ ನಡೆಯುವುದು ನಿಶ್ಚಿತ ಎನ್ನಲಾಗಿದೆ.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕಳೆದ ಭಾನುವಾರ ಬೆಳಗಾವಿಯ ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆದ ಸಭೆಯ ಮುಂದುವರಿದ ಭಾಗವಿದು. ಈ ಸಭೆಯಲ್ಲೂ ಯತ್ನಾಳ್, ಜಾರಕಿಹೊಳಿ ಜತೆಗೆ ಅರವಿಂದ್ ಲಿಂಬಾವಳಿ, ಅಣ್ಣಾ ಸಾಹೇಬ್ ಜೊಲ್ಲೆ, ಜಿ.ಎಂ.ಸಿದ್ದೇಶ್ವರ್, ಪ್ರತಾಪ್ ಸಿಂಹ, ಕುಮಾರ್‌ ಬಂಗಾರಪ್ಪ, ಬಿ.ಪಿ.ಹರೀಷ್ ಅವರೊಂದಿಗೆ ಇತರ ಹಲವು ಮುಖಂಡರೂ ಜತೆಗೂಡುವ ನಿರೀಕ್ಷೆಯಿದೆ ಎಂದು ರಾಜಕೀಯ ಪಂಡಿತರು ಹೇಳುತ್ತಿದ್ದಾರೆ.

ಪಾದಯಾತ್ರೆ ಹೆಸರಲ್ಲಿ ಸಭೆ:

ಮೇಲ್ನೋಟಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮುಂದಿಟ್ಟುಕೊಂಡು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಈ ಸಭೆ ನಡೆಸಲಾಗುವುದು ಎಂದು ಹೇಳಲಾಗುತ್ತಿದ್ದರೂ ಇದು ವಿಜಯೇಂದ್ರ ಅವರ ನಾಯಕತ್ವಕ್ಕೆ ಸಡ್ಡು ಹೊಡೆಯುವುದೇ ಆಗಿದೆ ಎನ್ನುವುದು ಸತ್ಯ.

ಈ ಬಾರಿಯ ಸಭೆಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ತೆರಳುವ ಬಗ್ಗೆ, ವರಿಷ್ಠರ ಮೇಲೆ ಒತ್ತಡ ಹೇರುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಈಗಾಗಲೇ ಬೆಳಗಾವಿ ಸಭೆ ಬಳಿಕ ಬಿಜೆಪಿ ಪಾಳೆಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ವಿಜಯೇಂದ್ರ ಅವರು ಬುಧವಾರ ಬೆಂಗಳೂರಿನಲ್ಲಿ ಸಂಘ ಪರಿವಾರದ ಮುಖಂಡರು ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದರ ಬೆನ್ನಲ್ಲೇ ಬಂಡಾಯದ ಮತ್ತೊಂದು ಸಭೆ ನಡೆಸಲು ಮುಂದಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ವಿಜಯಪುರ: ಗ್ಯಾರಂಟಿ ಯೋಜನೆ ಮತ್ತು BPL Card ರದ್ದು ಮಾಡುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಚಿವ ಎಂ.ಬಿ
ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕಮಿಟ್ ಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ವಿಜಯಪುರದಲ್ಲಿ ಸಚಿವ ಎಂ. ಬಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸು ತಜ್ಞರು. 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟವಾಗಿ ಹೇಳಿದರು.

BPL Card ರದ್ದು:

ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲಿ ಒತ್ತಡ ಬಹಳ ಇದೆ ರಾಜ್ಯದಲ್ಲಿ ಅತಿ ಹೆಚ್ಚು 82% ಬಿಪಿಎಲ್ ಕಾರ್ಡ್. ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ ಎಂದು ಮಾಹಿತಿ ನೀಡಿದ್ದಾರೆ.

ಅನವಶ್ಯಕವಾಗಿ ಶ್ರೀಮಂತರ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ ಎಂದ ಎಂಬಿ ಪಾಟೀಲ್, ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ