BJP Rebels Basanagouda patil yatnal vs BY Vijayendra

BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ (BJP Rebels) ಪಾದಯಾತ್ರೆಗೆ ಪಕ್ಷದ ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ ಎನ್ನುವ ಮೂಲಕ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ವಿರೋಧಿ ಬಣದ‌ ಮುಂದೆ ಮಂಡಿಯೂರಿದ್ರಾ ಎಂಬ ಮಾತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಹೌದು, ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲವರು ಪಾದಯಾತ್ರೆ ಮಾಡುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಇದರಿಂದ ಪಕ್ಷಕ್ಕೆ ಶಕ್ತಿ ಸಿಗುವುದಾದರೆ, ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ ಎಂದು ಹೇಳಿದ್ದಾರೆ.

Join Our Telegram: https://t.me/dcgkannada

ವರಿಷ್ಠರು ಅನುಮತಿ ನೀಡಿದರೆ ಮಾತ್ರ ಪಾದಯಾತ್ರೆ ಮಾಡಲು ಅವರು ಸ್ವತಂತ್ರರು. ಆದರೆ, ಆ ಪಾದಯಾತ್ರೆ ಪಕ್ಷಕ್ಕೆ ಪೂರಕವಾಗಿರಬೇಕು ಮತ್ತು ಪಕ್ಷ ಸಂಘಟನೆಗೆ ಲಾಭದ ಸದುದ್ದೇಶ ಇರಬೇಕು ಎಂದು ಅಭಿಪ್ರಾಯಪಟ್ಟರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ(BY Vijayendra), ನಾನು ಪಕ್ಷದ ಅಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಆದ್ಯ ಕರ್ತವ್ಯ. ನಾನು ಅಧ್ಯಕ್ಷನಾದಾಗಿನಿಂದಲೂ ಸತತವಾಗಿ ಆ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಭಾನುವಾರ ಬೆಳಗಾವಿಯ ರೆಸಾರ್ಟ್‌ವೊಂದರಲ್ಲಿ ಬಿಜೆಪಿಯ ಕೆಲವು ಹಿರಿಯ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದಿಂದ ಬಳ್ಳಾರಿವರೆಗೆ (Kudalasangama to Ballary) ಪಾದಯಾತ್ರೆ ನಡೆಸಬೇಕು. ಅಲ್ಲದೆ, ಶೀಘ್ರ ಈ ಸಂಬಂಧ ಪಕ್ಷದ ವರಿಷ್ಠರನ್ನು ಸಂಪರ್ಕಿಸಬೇಕು ಎಂಬ ನಿರ್ಧಾರ ಕೈಗೊಂಡಿದ್ದರು.

ಪಕ್ಷದ ಮುಖಂಡರು, ಬಸನಗೌಡ ಪಾಟೀಲ ಯತ್ನಾಳ್ (Basanagouda patil yatnal), ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಜಿ.ಎಂ.ಸಿದ್ಧೇಗೌಡ, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ ಆ ಸಭೆಯಲ್ಲಿ ಭಾಗವಹಿಸಿದ್ದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ