BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ