BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ