BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600