BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ