BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ