BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್