BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್