BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು ಕ್ರೈಂ ಪಿ.ಎಸ್.ಆಯ್ ಆರ್.ಎಸ್.ಬಂಗಿ ಹೇಳಿದರು. ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ. ವ್ಯಸನಕ್ಕೆ ಒಳಗಾಗಬಾರದು. ವ್ಯಸನಮುಕ್ತ ಸದ್ಗುಣ ಯುಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಲ್ಲಿ ಮನೆ, ಶಾಲೆ,

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದು ಬಣಜಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಅಶೋಕ ಚಟ್ಟೇರ್ ಹೇಳಿದರು. ಪಟ್ಟಣದ ಕಿಲ್ಲಾದ ಹೊಸಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ ೨೩ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ ನಾಲತವಾಡ, ಸಮಾಜದ ಯುವ ಘಟಕದ ಅಧ್ಯಕ್ಷ ಶಂಕರ ಕಡಿ, ನಿವೃತ್ತ ಶಿಕ್ಷಕ