ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ನಂದಿಕೂರಲ್ಲಿ ಈ ದುರ್ಘಟನೆ ನಡೆದಿದೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜ್ಯೋತಿ ಪಾಟೀಲ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಮನೆ ಮುಂದೆಯೇ ಸೂಸೈಡ್ ಮಾಡಿಕೊಂಡಿದ್ದಾರೆ.

ಮಲ್ಲಿನಾಥ್ ಮನೆಗೆ ಹೋಗಿ ಜ್ಯೋತಿ ಬಾಗಿಲು ತಟ್ಟಿದ್ದಾರೆ. ಮಲ್ಲಿನಾಥ್ ಅವರ ಪತ್ನಿ ಬಾಗಿಲು ತೆರೆದಿದ್ದಾರೆ. ಕೂಡಲೇ ಜ್ಯೋತಿ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ

ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ

ಮುದ್ದೇಬಿಹಾಳ : ಪಟ್ಟಣದ ನಿವಾಸಿ ಪರಶುರಾಮ ಸಿಂಧೆ ಅವರನ್ನು ಜಯ ಕರ್ನಾಟಕ ಸಂಘಟನೆಯ ವಿಜಯಪುರ

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು.

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ

17.5 ಕೋಟಿ ರೂ. ವಂಚನೆ ಪ್ರಕರಣ: ಸಿಎಂ ಸಿದ್ದರಾಮಯ್ಯ OSD ಪುತ್ರ ಸೇರಿ ಮೂವರ ವಿರುದ್ಧ NRI ದೂರು!

17.5 ಕೋಟಿ ರೂ. ವಂಚನೆ ಪ್ರಕರಣ: ಸಿಎಂ ಸಿದ್ದರಾಮಯ್ಯ OSD ಪುತ್ರ ಸೇರಿ ಮೂವರ ವಿರುದ್ಧ NRI ದೂರು!

​ಬೆಂಗಳೂರು: ​ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ (OSD) ವೆಂಕಟೇಶಯ್ಯ ಅವರ ಪುತ್ರ ರಜತ್ ವೆಂಕಟೇಶ್ ಅವರು ₹17.5 ಕೋಟಿ ಮೌಲ್ಯದ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನಿವಾಸಿ ಭಾರತೀಯರೊಬ್ಬರು (NRI) ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯು ಮುಖ್ಯಮಂತ್ರಿ ಕಚೇರಿಯನ್ನೂ ಸಾರ್ವಜನಿಕ ಚರ್ಚೆಗೆ ಗ್ರಾಸವಾಗುವಂತೆ ಮಾಡಿದೆ. ಪ್ರಕರಣದ ವಿವರ: ​ಆರೋಪಿಗಳು: ರಜತ್ ವೆಂಕಟೇಶ್, ಉದ್ಯಮಿಗಳಾದ ಸ್ನೇಹಾ ರಾಕೇಶ್ ಮತ್ತು ರಾಬಿನ್

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು ಅರಳುತಿದೆ,ಹೊಸ ದಿನ ನಿಮಗಾಗಿ ಕಾಯುತಿದೆ.​ಮನಸಿನಲಿ ನೆಮ್ಮದಿ ಇರಲಿ,ಕೆಲಸದಲಿ ಯಶಸ್ಸು ಸಿಗಲಿ.ಪ್ರತಿ ಹೆಜ್ಜೆಯಲಿ ಸಂತಸ ತುಂಬಿರಲಿ,ಮುಂಜಾನೆಯ ಶುಭಾಶಯಗಳು!