Bold step of labor department to eradicate child labour: Minister Santhosh Lad

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬೆಂಗಳೂರು, ಜೂನ್‌ 12: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಮಹಾತ್ಮ ಗಾಂಧಿ ಉದ್ಯಾನದಿಂದ ಕೆ ಆರ್‌ ವೃತ್ತದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬಹುದು ಎಂದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ. ಯಾರೇ ಇದನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಪೋಷಕರಿಗೂ ಶಿಕ್ಷೆ ಆಗಲಿದೆ. ಇದರ ಮೂಲಕ ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಸಾಮಾಜಿಕ ವ್ಯವಸ್ಥೆಯಡಿ ಅರಿವು ಮೂಡಿಸಬೇಕು ಎಂದು ವಿವರಿಸಿದರು.

ರಾಜ್ಯದ ೨೨ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾಧಿಕಾರಿ, ಎಸ್‌ ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ಮಾಡಿ ಮಕ್ಕಳು ಕಾರ್ಮಿಕರಾಗುವುದನ್ನು ತಡೆಯಲು ಕ್ರಮ ಕೈಗೊಂಡಿದ್ದೇವೆ. ಡಿಸಿ, ಸಿಇಒ, ಎಸ್ಪಿಗಳು ಮುತುವರ್ಜಿ ವಹಿಸಿದರೆ ನಿರ್ಮೂಲನೆ ಸುಲಭವಾಗಲಿದೆ. ವರ್ಷಕ್ಕೆ ಒಂದು ಬಾರಿ ದಿನಾಚರಣೆ ಮಾಡಿದರೆ ಸಾಲದು. ಎರಡು ತಿಂಗಳಿಗೆ ಒಂದು ಬಾರಿ ಈ ಸಂಬಂಧ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಹೈವೆ ಬದಿಗಳಲ್ಲಿನ ಡಾಬಾ, ಹೋಟೆಲ್‌, ಗ್ಯಾರೇಜ್‌, ಸಣ್ಣ ಸಣ್ಣ ಮೆಕ್ಯಾನಿಕ್‌ ಶಾಪ್‌ಗಳಲ್ಲಿ ಮಕ್ಕಳು ಕೆಲಸ ಮಾಡುತ್ತಾರೆ. ಅವರು ಕೆಲಸ ಬಿಟ್ಟು ಶಾಲೆಗಳಿಗೆ ಹೋಗುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಡಿದ್ದು ಯಾರದೇ ಗಮನಕ್ಕೆ ಬಂದರೆ ಕೂಡಲೇ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. ಸರ್ಕಾರದೊಂದಿಗೆ ಕೈ ಜೋಡಿಸಿ ನಾವು ನೀವೆಲ್ಲ ಸೇರಿ ಈ ಪದ್ಧತಿಯನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಸರ್ಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಚಟುವಟಿಕೆ ಹೆಚ್ಚಿಸಬೇಕು. ಮಕ್ಕಳಿಗೆ ಕಲಿಕೆ ಮೊದಲಾಗಬೇಕು. ಕೆಲಸ ಅಲ್ಲ. ಆಟವಾಡುವ ವಯಸ್ಸಲ್ಲಿ ಮಕ್ಕಳು ಕೆಲಸ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸೇರಿ ಒಂದಾಗೋಣ. ನಾವು ನೀವು ಸೇರಿ ಒಳ್ಳೆ ಕೆಲಸ ಮಾಡೋಣ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಮಾತನಾಡಿ,” ಬಾಲ ಕಾರ್ಮಿಕರಾಗದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ನಂಟಿದೆ ಎನ್ನಲಾಗುತ್ತದೆ. ಅದು ಹೌದು. ಆದರೆ ಅದನ್ನು ಹೋಗಲಾಡಿಸಬಹುದು ಎಂದರು.

ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ಅಂತಹವರಿಗೊಂದು ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ಮಕ್ಕಳು ಉತ್ತಮ ಪ್ರಜೆ ಆಗುತ್ತಾರೆ. ನಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡು ಬಂದರೆ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದರು.

ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಸ್ವೀಕರಿಸಲಾಯಿತು.

ಜಾಥಾದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಜಿ ಜಗದೀಶ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಭಾಗವಹಿಸಿದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ