Bold step of labor department to eradicate child labour: Minister Santhosh Lad

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬೆಂಗಳೂರು, ಜೂನ್‌ 12: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಮಹಾತ್ಮ ಗಾಂಧಿ ಉದ್ಯಾನದಿಂದ ಕೆ ಆರ್‌ ವೃತ್ತದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬಹುದು ಎಂದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ. ಯಾರೇ ಇದನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಪೋಷಕರಿಗೂ ಶಿಕ್ಷೆ ಆಗಲಿದೆ. ಇದರ ಮೂಲಕ ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಸಾಮಾಜಿಕ ವ್ಯವಸ್ಥೆಯಡಿ ಅರಿವು ಮೂಡಿಸಬೇಕು ಎಂದು ವಿವರಿಸಿದರು.

ರಾಜ್ಯದ ೨೨ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾಧಿಕಾರಿ, ಎಸ್‌ ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ಮಾಡಿ ಮಕ್ಕಳು ಕಾರ್ಮಿಕರಾಗುವುದನ್ನು ತಡೆಯಲು ಕ್ರಮ ಕೈಗೊಂಡಿದ್ದೇವೆ. ಡಿಸಿ, ಸಿಇಒ, ಎಸ್ಪಿಗಳು ಮುತುವರ್ಜಿ ವಹಿಸಿದರೆ ನಿರ್ಮೂಲನೆ ಸುಲಭವಾಗಲಿದೆ. ವರ್ಷಕ್ಕೆ ಒಂದು ಬಾರಿ ದಿನಾಚರಣೆ ಮಾಡಿದರೆ ಸಾಲದು. ಎರಡು ತಿಂಗಳಿಗೆ ಒಂದು ಬಾರಿ ಈ ಸಂಬಂಧ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಹೈವೆ ಬದಿಗಳಲ್ಲಿನ ಡಾಬಾ, ಹೋಟೆಲ್‌, ಗ್ಯಾರೇಜ್‌, ಸಣ್ಣ ಸಣ್ಣ ಮೆಕ್ಯಾನಿಕ್‌ ಶಾಪ್‌ಗಳಲ್ಲಿ ಮಕ್ಕಳು ಕೆಲಸ ಮಾಡುತ್ತಾರೆ. ಅವರು ಕೆಲಸ ಬಿಟ್ಟು ಶಾಲೆಗಳಿಗೆ ಹೋಗುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಡಿದ್ದು ಯಾರದೇ ಗಮನಕ್ಕೆ ಬಂದರೆ ಕೂಡಲೇ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. ಸರ್ಕಾರದೊಂದಿಗೆ ಕೈ ಜೋಡಿಸಿ ನಾವು ನೀವೆಲ್ಲ ಸೇರಿ ಈ ಪದ್ಧತಿಯನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಸರ್ಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಚಟುವಟಿಕೆ ಹೆಚ್ಚಿಸಬೇಕು. ಮಕ್ಕಳಿಗೆ ಕಲಿಕೆ ಮೊದಲಾಗಬೇಕು. ಕೆಲಸ ಅಲ್ಲ. ಆಟವಾಡುವ ವಯಸ್ಸಲ್ಲಿ ಮಕ್ಕಳು ಕೆಲಸ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸೇರಿ ಒಂದಾಗೋಣ. ನಾವು ನೀವು ಸೇರಿ ಒಳ್ಳೆ ಕೆಲಸ ಮಾಡೋಣ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಮಾತನಾಡಿ,” ಬಾಲ ಕಾರ್ಮಿಕರಾಗದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ನಂಟಿದೆ ಎನ್ನಲಾಗುತ್ತದೆ. ಅದು ಹೌದು. ಆದರೆ ಅದನ್ನು ಹೋಗಲಾಡಿಸಬಹುದು ಎಂದರು.

ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ಅಂತಹವರಿಗೊಂದು ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ಮಕ್ಕಳು ಉತ್ತಮ ಪ್ರಜೆ ಆಗುತ್ತಾರೆ. ನಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡು ಬಂದರೆ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದರು.

ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಸ್ವೀಕರಿಸಲಾಯಿತು.

ಜಾಥಾದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಜಿ ಜಗದೀಶ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ