ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ ಬುದ್ಧ,,ಬಸವ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಪ್ರಮುಖರಾದ ಅನಿಲ ಹೊಸಮನಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ್ ಹೈಸ್ಕೂಲ್ ಆವರಣದಲ್ಲಿ ಈ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ .ಮೇಳಕ್ಕೆ ಸಾಹಿತ್ಯ ಬಳಗದಿಂದಲೇ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಲಾಗುತ್ತಿದ್ದು ಯಾವುದೇ ರಾಜಕಾರಣಿಯ ಬಳಿ ಇದಕ್ಕಾಗಿ ಕೈಒಡ್ಡಿಲ್ಲ ಎಂದು ತಿಳಿಸಿದರು.

ಮೇಳದಲ್ಲಿ ಸಾಂಸ್ಕೃತಿಕ ಸಮಾವೇಶ,ಐದು ದಿನಗಳ ಲೇಖಕರ ಮತ್ತು ಓದುಗರ ಮಹಾಮೇಳ,ಅದಕ್ಕಾಗಿ ಲೇಖಕರ ಜೊತೆ ಸಂವಾದ,ವಿದ್ಯಾರ್ಥಿ ಯುವ ಜನರ ಚಿಂತನೆ ಇರಲಿದೆ.ದಲಿತಪರ ಚಳವಳಿಗಳಲ್ಲಿ ದಲಿತೇತರರು ಹೆಚ್ಚೆಚ್ಚು ಭಾಗವಹಿಸುವುದು ಇಂದಿನ ಅಗತ್ಯವಾಗಿದ್ದು ಪ್ರಗತಿಪರ ಹೋರಾಟಗಳಲ್ಲಿ ದಲಿತರು ದೊಡ್ಡ ಸಂಖ್ಯೆಯಲ್ಲಿ ಭಾವಹಿಸುವುದು ಅಷ್ಟೇ ಮುಖ್ಯವಾದ ಸಂಗತಿಯಾಗಿದೆ.ಈ ಕಾರ್ಯಕ್ರಮಕ್ಕೆ ಹತ್ತಾರು ಸಂಘಟನೆಗಳು ಜೊತೆಗೂಡಿವೆ ಎಂದು ತಿಳಿಸಿದರು.

ಮಾನವ ಬಂಧುತ್ವ ವೇದಿಕೆ ಸಂಚಾಲಕ ಎಸ್.ಎಂ.ನೆರಬೆAಚಿ ಮಾತನಾಡಿ,ಏಪ್ರೀಲ್ 10 ರಿಂದ ಆರಂಭಗೊಳ್ಳುವ ಪುಸ್ತಕ ಮೇಳದಲ್ಲಿ ಪುಸ್ತಕ ಮೇಳ ಉದ್ಘಾಟನೆ,ಡಾ.ಅಂಬೇಡ್ಕರ್ ವೃತ್ತದಿಂದ ಪುಸ್ತಕ ಮೇಳದ ಸ್ಥಳದವರೆಗೆ ಪುಸ್ತಕಗಳ ಜೊತೆ ಲೇಖಕರ ಮೆರವಣಿಗೆ ನಡೆಯಲಿದೆ.ಏ.11 ರಂದು ಮಹಾತ್ಮಾ ಜ್ಯೋತಿ ಪುಲೆ ಜನ್ಮದಿನ,ಸಾವಿತ್ರಿಬಾಯಿ ಪುಲೆ ಮಾರ್ಗದಿಂದ ಪುಸ್ತಕ ಮೇಳದ ಸ್ಥಳದವರೆಗೆ ಶಿಕ್ಷಕ ದಂಪತಿಗಳ ಮೆರವಣಿಗೆ ನಡೆಸಲಾಗುವುದು.ಏ.12 ರಂದು ಬಸವಾದಿ ಶರಣ ವಚನಗಳ ಕಟ್ಟುಗಳಿಂದಿಗೆ ಬಸವೇಶ್ವರ ವೃತ್ತದಿಂದ ಪುಸ್ತಕ ಮೇಳದ ಸ್ಥಳದವರೆಗೆ ಬಸವಾನುಯಾಯಿಗಳ ಮೆರವಣಿಗೆ ನಡೆಯಲಿದೆ.ಏ.13 ರಂದು ಅಸ್ಪೃಶ್ಯರ ಶಿಕ್ಷಣಕ್ಕಾಗಿ ಶ್ರಮಿಸಿದ ಕಾಕಾ ಕಾರಖಾನೀಸ್ ಸ್ಮರಣೆ, ಅವರ ಬೋಡಿಂಗನಲ್ಲಿದ್ದು ವಿದ್ಯೆ ಪಡೆದವರು, ಅವರ ಕುಟುಂಬಸ್ಥರಿAದ ಕಾಕಾ ಕಾರಖಾನೀಸ್ ಅವರ ಮನೆಯಿಂದ ಪುಸ್ತಕ ಮೇಳದವರೆಗೆ ಮೆರವಣಿಗೆ ನಡೆಸಲಾಗುತ್ತದೆ.ಎ.14 ರಂದು ಡಾ.ಅಂಬೇಡ್ಕರ್ ಜನ್ಮದಿನ ನಿಮಿತ್ಯ ಅಂಬೇಡ್ಕರ್ ವೃತ್ತದಿಂದ ಸಂವಿದಾನ ಪೀಠಿಕೆ ಕಂಠಪಾಠ ಮಾಡಿದ ವಿದ್ಯಾರ್ಥಿ ಹಾಗೂ ಶಿಕ್ಷಕರ ಮೆರವಣಿಗೆ.ಪ್ರತಿ ದಿನ ಸಂಜೆ 4 ರಿಂದ ರಾತ್ರಿ 9 ಗಂಟೆಯವರೆಗೆ ಕವಿಗೋಷ್ಠಿ,ವಿದ್ಯಾರ್ಥಿಗಳಿಂದ ಪುಸ್ತಕದ ಕುರಿತು ಮಾತು ನಡೆಯಲಿದೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ಶಿವಪುತ್ರಪ್ಪ ಅಜಮನಿ ಮಾತನಾಡಿ, ಎಲ್ಲ ಶೋಷಿತರಿಗೆ ,ಅನ್ಯಾಯಕ್ಕೊಳಗಾದ ಬಡವರಿಗೆ, ಸಮಾಜದ ಮುಖ್ಯವಾಹಿನಿಯಿಂದ ದೂರ ಇರುವವ ಎಲ್ಲರಿಗೂ ಸಂವಿದಾನ ಮುಖ್ಯ ಬಲವಾಗಿದೆ.ಹೊಸ ಅರಿವನ್ನು ವಿಸ್ತರಿಸುವ ಬುದ್ಧ,ಬಸವ, ಅಂಬೇಡ್ಕರ್‌ರ ಓದು ಇಂದಿನ ಅಗತ್ಯ.ಈ ಉದ್ದೇಶದಿಂದ ಹಮ್ಮಿಕೊಂಡಿರುವ ಪುಸ್ತಕ ಮೇಳದ ಯಶಸ್ವಿಗೆ ಸರ್ವರೂ ಶ್ರಮಿಸಬೇಕು ಎಂದು ಹೇಳಿದರು.
ಬಳಗದ ಸದಸ್ಯರಾದ ಚನ್ನು ಕಟ್ಟೀಮನಿ, ಎಸ್.ಎಂ.ಬೇವಿನಗಿಡದ , ಸೋಮು ಧರಿದೇವಿ, ಹುಸೇನ ಮುಲ್ಲಾ, ಸುನೀಲ ಮನಗೂಳಿ, ಇದ್ದರು.

Latest News

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ