BPL ration card good news

BPL ಕಾರ್ಡ್.. GOOD NEWS

BPL ಕಾರ್ಡ್.. GOOD NEWS

ಬೆಂಗಳೂರು: ಇನ್ನು ಮುಂದೆ ಅನ್ನಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (BPL) ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Join Our Telegram: https://t.me/dcgkannada

ಅಕ್ಕಿ ಪೂರೈಸುವ ಬಗ್ಗೆ ಭಾರತೀಯ ಆಹಾರ ನಿಗಮ (FCI) ಈಗಾಗಲೇ ಘೋಷಣೆ ಮಾಡಿದೆ. ಹೀಗಾಗಿ, ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗುವ ಸಾಧ್ಯತೆಯಿದೆ.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೂ ಕಾರಣವಾಯಿತು. ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ.

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಕರ್ನಾಟಕಕ್ಕೆ ಅಕ್ಕಿ ಪೂರೈಸಲಿಲ್ಲ ಏಕೆ?

ಕಳೆದ ವರ್ಷ ಮುಂಗಾರು ಮಳೆಯ ಕೊರತೆಯು ಅಕ್ಕಿ ದಾಸ್ತಾನಿನ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ, ದೇಶೀಯ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಸ್ಥಗಿತಗೊಳಿಸಲಾಗಿತ್ತು. ಆ ಕಾರಣದಿಂದ ರಾಜ್ಯ ಸರ್ಕಾರದ ಮನವಿಯನ್ನು ಪರಿಗಣಿಸಿರಲಿಲ್ಲ. ಈ ವರ್ಷ ಉತ್ತಮ ಮಳೆಯಾಗಿದೆ. ಎಫ್‌ಸಿಐ (ಕರ್ನಾಟಕ ವಿಭಾಗ) 7.42 ಲಕ್ಷ ಟನ್ ಅಕ್ಕಿ ದಾಸ್ತಾನು ಹೊಂದಿದೆ. 2025 ರ ಮಾರ್ಚ್‌ವರೆಗೆ ಕೆಜಿಗೆ 28 ​​ರೂಪಾಯಿನಂತೆ ರಾಜ್ಯಕ್ಕೆ ಪೂರೈಸಲು ಸಿದ್ಧವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಆಹಾರ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ಕೆಲವು ದಿನಗಳ ಹಿಂದಷ್ಟೇ ಹೇಳಿದ್ದನ್ನು ಈಗ ಸ್ಮರಿಸಬಹುದು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ