ಬಸ್ಸೇ ಎಮರ್ಜೆನ್ಸಿ ವಾಹನವಾಯ್ತು!

ಬಸ್ಸೇ ಎಮರ್ಜೆನ್ಸಿ ವಾಹನವಾಯ್ತು!

ಮಂಗಳೂರು: ಚಲಿಸುತ್ತಿದ್ದ ಬಸ್​​ನಲ್ಲೇ ವಿದ್ಯಾರ್ಥಿ ಹೃದಯಾಘಾತಕ್ಕೀಡಾದಾಗ ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು, ಜೀವ ರಕ್ಷಿಸಿದ ಅಪರೂಪದ ವಿದ್ಯಮಾನ ನಡೆದಿದೆ.

ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು.

ಬಸ್​​ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತಲುಪಿದರು.

ಸಂದರ್ಭವನ್ನು ಅರಿತುಕೊಂಡು ತಕ್ಷಣವೇ ಬಸ್ಸನ್ನು ಆಸ್ಪತ್ರೆಯತ್ತ ಚಲಾಯಿಸಿದ ಕಾರಣ ವಿದ್ಯಾರ್ಥಿಯನ್ನು ರಕ್ಷಿಸಲು ಸಾಧ್ಯವಾಯಿತು. ಪರಿಣಾಮವಾಗಿ ವಿದ್ಯಾರ್ಥಿಯ ಜೀವವೂ ಉಳಿಯಿತು. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಗೆ ಮತ್ತು ಮಾನವೀಯತೆಗೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬಸ್ ಚಾಲಕರು ಮತ್ತು ಕಂಡಕ್ಟರ್‌ಗಳು ಮಾನವೀಯತೆ ಮತ್ತು ಸಹಾನುಭೂತಿಯ ಸಾಕಾರರು ಎಂಬುದನ್ನು ಈ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಪ್ರಯಾಣಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.