BY vijayendra: ರಾಜಾಹುಲಿಗೀಗ 82 ವರ್ಷ.. ಈ ದರಿದ್ರ ಸರ್ಕಾರಕ್ಕೆ‌ ಇನ್ನೂ ರಾಜಾಹುಲಿಯ ಭಯ

BY vijayendra: ರಾಜಾಹುಲಿಗೀಗ 82 ವರ್ಷ.. ಈ ದರಿದ್ರ ಸರ್ಕಾರಕ್ಕೆ‌ ಇನ್ನೂ ರಾಜಾಹುಲಿಯ ಭಯ

ಮೈಸೂರು: ಈ ಕಾಂಗ್ರೆಸ್‌ ಸರ್ಕಾರ ದರಿದ್ರ‌ ಸರ್ಕಾರ. ಈ ಸರ್ಕಾರಕ್ಕೆ ಅಂಗವಿಕಲರಿಗೆ ಮಾಶಾಸನ ಕೊಡುವ ಯೋಗ್ಯತೆ ಇಲ್ಲ. ಕಳೆದ ಆರು ತಿಂಗಳಿಂದ ಮಾಸಾಶನ ನೀಡಿಲ್ಲ. ಇಂತಹ ದರಿದ್ರ ಸರ್ಕಾರ ಒಂದಾದ ಮೇಲೆ ಒಂದರಂತೆ ಹಗರಣದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ(BY vijayendra) ಟೀಕಿಸಿದರು.

Join Our Telegram: https://t.me/dcgkannada

ಮೈಸೂರಿನಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅವರಿಗೆ ಸಿದ್ದರಾಮಯ್ಯ‌ ಅನ್ನಲ್ಲ. ಅಂದ್ರೆ, ಹಿಂದುಳಿದ ನಾಯಕನ ತುಳಿಯುವ ಪ್ರಯತ್ನ‌ ಅಂತಾರೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ದರಿದ್ರ ಸರ್ಕಾರ ಬೇಡ.‌ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ವಿಜಯೇಂದ್ರ (BY vijayendra) ಒತ್ತಾಯಿಸಿದರು.

ದುರಹಂಕಾರದಿಂದ‌ ವಿಪಕ್ಷಗಳಿಗೆ ಧಮ್ಕಿ ಹಾಕುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸವಾಲು ಹಾಕುವೆ. ಬನ್ನಿ ಹಗರಣ ಬಿಚ್ಚಿಡಿ. ಅದರ ಬಗ್ಗೆ ಚರ್ಚೆ ಮಾಡೋಣ.‌ ಅದು ಬಿಟ್ಟು ವಿಪಕ್ಷಗಳಿಗೆ ಧಮ್ಕಿ ಹಾಕುವುದನ್ನು ಬಿಟ್ಟು ಬಿಡಿ ಎಂದು ಗರಂ ಆಗಿ‌ ಹೇಳಿದರು.

ಇದನ್ನೂ ಓದಿ: BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

ಯಡಿಯೂರಪ್ಪ ಬಡವರ, ರೈತರ ನಾಯಕ. ಅವರ ರಾಜಕೀಯ ನಿವೃತ್ತಿ ಬಗ್ಗೆ ಮಾತಾಡುತ್ತಿರಲ್ಲ. ಅವರಿಗೆ 82 ವಯಸ್ಸಾಗಿದೆ. ಅವರನ್ನು ಕಂಡಿರೆ ನಿಮಗೆ ಇನ್ನೂ ಭಯ ಇದೆವೇ ಎಂದು ಕೆಣಕಿದರು.

ನಿಮ್ಮ ಸ್ಥಾನ ಉಳಿಸಿಕೊಳ್ಳಿ. ಯಡಿಯೂರಪ್ಪ ಬಗ್ಗೆ ಮಾತಾಡೋದು ಬಿಡಿ. ಅವರ ಮೇಲೆ ಮಾರಾಣಾಂತಿಕ ಹಲ್ಲೆ ಆದಾಗ, ಅವರು ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಅವರು ಬಡವರ ಪರ, ರೈತರ ಪರ ಇರುತ್ತಾರೆ. ಅವರ ರಾಜೀನಾಮೆ ಕುರಿತು ನೀಡಿದ ಹೇಳಿಕೆ ಹಿಂದಕ್ಕೆ ಪಡೆಯಿರಿ ಎಂದು ಸಲಹೆ ನೀಡಿದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ