Cement Garlic Now cement garlic has hit the market

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ (Cement Garlic) ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ (Cement Garlic) ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ಇದನ್ನೂ ಓದಿ: Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ