ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್