ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ ಹಾಗೂ ಸುಮಲತಾ ಗಡಿಯಪ್ಪನವರ ಅವರ  ಪುತ್ರಿ.ವಿದ್ಯಾರ್ಥಿನಿ ಸಿಂಚನಾ ಸಾಧನೆಗೆ ಬಿದರಕುಂದಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.