ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ