ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.