ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಎನ್.ಎಸ್.ಪೂಜಾರಿ ಕನ್ಸಟ್ರಕ್ಷನ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಗುರಿಯನ್ನಿಟ್ಟುಕೊಂಡು ನಾವು ಮುದ್ದೇಬಿಹಾಳ,ಕೋಳೂರು ಹಾಗೂ ಅಡವಿ ಹುಲಗಬಾಳದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು ತಗೆಯುವುದು ವಿದ್ಯಾರ್ಥಿಗಳಾದ ನಿಮ್ಮ ಕೈಯ್ಯಲ್ಲಿದೆ.ವಿದ್ಯೆ ಶಿಖರವೇರಿ ಗರ್ವದ ಮೇಲೆ ಕೂರಬಾರದು.ಹಣದಿಂದ ಯಾವುತ್ತೂ ಶಿಕ್ಷಣವನ್ನು ಅಳೆಯಬಾರದು ಎಂದು ಕಕ್ಕೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಯ್ಯ ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಬೀದರನ