ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನಾಡು ನುಡಿ ವಿಚಾರದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದ ಕೇಂದ್ರ ಸಚಿವರು

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದ ಹೆಚ್.ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ