Siddaramaiah: ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಸಿಎಂ

Siddaramaiah: ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಸಿಎಂ

ಚಾಮರಾಜನಗರ ಆ 10: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಲೇವಡಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ವನ್ನು ಉದ್ಘಾಟಿಸಿ ಮಾತನಾಡಿದರು.

Join Our Telegram: https://t.me/dcgkannada

ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದರು.

ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು. ಆದರೂ ನಾನು ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದರು. (Siddaramaiah)

ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರ್ತೇನೆ ಎಂದು ಬಿಜೆಪಿ-ಜೆಡಿಎಸ್ ಅವರ ಜಂಟಿ ಷಡ್ಯಂತ್ರವನ್ನು ಲೇವಡಿ ಮಾಡಿದರು.

ಇದನ್ನೂ‌ ಓದಿ: BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

ಸಿದ್ದರಾಮಯ್ಯರ (Siddaramaiah) ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆಯಾಗಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು ಭರವಸೆ ನೀಡಿದರು.

ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುಬರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕವಾಗಿ ವೇಗದ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಸಚಿವರಾದ ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್, ಶಿವರಾಜ ತಂಗಡಗಿ, ಶಾಸಕರಾದ ಹನೂರು ಮಂಜುನಾಥ್, ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಸಂಸದರಾದ ಸುನಿಲ್ ಬೋಸ್, ವಿಧಾನ‌ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ