ಜಾರ್ಖಂಡ್: ಮಾಜಿ ಸಿಎಂ ಹಾಗೂ JMM ಶಾಸಕ ಚಂಪೈ ಸೊರೆನ್ (Champai Soren) ಬಿಜೆಪಿ ಸೇರಲಿದ್ದಾರಂತೆ. ಈಗಾಗಲೇ ಅವರು ದೆಹಲಿ ತಲುಪಿದ್ದು, ಅಮಿತ್ ಶಾ ಅವರ ಸಮ್ಮುಖದಲ್ಲಿ ತಮ್ಮ ಇತರೆ ಮೂವರು JMM ಶಾಸಕರೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಜೈಲಿಗೆ ಹೋಗಿದ್ದಾಗ ಅವರ ಜವಾಬ್ದಾರಿಯನ್ನು ನಿಭಾಯಿಸಿದ್ದರು.
Join Our Telegram: https://t.me/dcgkannada
ಚಂಪೈ ಸೊರೇನ್ (Champai Soren) ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಅವರು ತಮ್ಮ ಸಿಬ್ಬಂದಿಯೊಂದಿಗೆ ಇಂದು ಮುಂಜಾನೆ ದೆಹಲಿಗೆ ತೆರಳಿರುವುದು ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದಂತಿದೆ.
ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರು ಜನವರಿ 31ರಂದು ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದರು. ಅದಕ್ಕೂ ಕೆಲ ಕ್ಷಣ ಮುನ್ನ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..
ಬಳಿಕ, ಚಂಪೈ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. ಫೆ.2ರಂದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಐದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ಹೇಮಂತ್ ಸೊರೇನ್ ಪುನಃ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದಕ್ಕೆ ಚಂಪೈ ಸೊರೇನ್ ಅಸಮಾಧಾನಗೊಂಡಿದ ಎನ್ನಲಾಗಿದೆ.
ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ
ಬೆಂಗಳೂರು : ರಾಜ್ಯಪಾಲರು ವಿವಾದವೇ ಅಲ್ಲದ ವಿಚಾರವನ್ನು ವಿವಾದ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ರಾಜ್ಯಪಾಲರ ನಡೆಯನ್ನು ಖಂಡಿಸಿ ಪಕ್ಷವು ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಿದೆ. ಯಾವುದೇ ದಾಂದಲೆ ಇಲ್ಲದೆ ಶಾಂತಿಯುತವಾಗಿ ಎಚ್ಚರಿಕೆಯಿಂದ ಪ್ರತಿಭಟನೆ ನಡೆಸಲಾಗುವುದು. ಗಾಂಧಿ ಪ್ರತಿಪಾದಿಸಿದ ಶಾಂತಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ ದೇಶಕ್ಕೆ ಸಂದೇಶ ನೀಡುವುದಾಗಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ರಾಜ್ಯಪಾಲರು ತೀರ್ಮಾನ ಸರಿಯಾಗಿ ಮಾಡಿಲ್ಲ. ಸಚಿವ ಸಂಪುಟ, ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ಹಿಂದಿನ ಸಂಪುಟ ಸಭೆಯಲ್ಲ ನಾವು ಕೈಗೊಂಡ ನಿರ್ಣಯವನ್ನು ರಾಜ್ಯಪಾಲರು ಸ್ವೀಕರಿಸಿಲ್ಲ. ರಾಜಭವನವನ್ನು ದುರಪಯೋಗ ಮಾಡಿ ನಿರ್ಧಾರ ಹೊರಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದರು.