60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ ನೀಡಿ ಹೃದಯವೈಶಾಲ್ಯತೆ ತೋರಿದ್ದಾರೆ.ಅಲ್ಲದೇ ಕಷ್ಟ ಎಂದು ಬಂದ ಅತ್ಯಂತ ಕಡು ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಯೋಜನೆಯಡಿ ಉಚಿತವಾಗಿ ಓದಿಸುವ ಕಾರ್ಯ ಮಾಡಿದ್ದಾರೆ.

ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ : ಏ.3 ರಂದು ಬೆಳಗ್ಗೆ 11ಕ್ಕೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣ ಬಳಿ ಇರುವ ಎಕ್ಸಪರ್ಟ್ ಕಾಲೇಜು ಆವರಣದಲ್ಲಿ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯನ್ನು ಪ್ರಸಕ್ತ ಎಸ್.ಎಸ್.ಎಲ್.ಸಿ(ಎಸ್.ಎಸ್.ಎಲ್.ಸಿ/ಸಿಬಿಎಸ್‌ಇ/ಐಸಿಎಸ್‌ಸಿ) ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ.

ಬಹುಮಾನದ ವಿವರ : ಪ್ರಥಮ ಬಹುಮಾನ ಗಳಿಸುವ ವಿದ್ಯಾರ್ಥಿಗೆ 25 ಸಾವಿರ ರೂ.ನಗದು ಸಮೇತ 2.80 ಲಕ್ಷ ರೂ.ಶಿಷ್ಯವೇತನ, ದ್ವಿತೀಯ ಬಹುಮಾನ ಗಳಿಸುವ ವಿದ್ಯಾರ್ಥಿಗೆ 20 ಸಾವಿರ ರೂ.ನಗದು À ಸಮೇತ 2.75 ಲಕ್ಷ ರೂ.ಶಿಷ್ಯವೇತನ, ತೃತೀಯ ಬಹುಮಾನ ಗಳಿಸುವ ವಿದ್ಯಾರ್ಥಿಗೆ 15 ಸಾವಿರ ರೂ.ನಗದು ಸಮೇತ 2.70 ಲಕ್ಷ ರೂ.ಶಿಷ್ಯವೇತನ,ನಾಲ್ಕನೇ ಬಹುಮಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 10 ಸಾವಿರ ರೂ.ನಗದು ಸಮೇತ 2.65 ಲಕ್ಷ ರೂ.ಶಿಷ್ಯವೇತನ,ಐದನೇ ಬಹುಮಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 5ಸಾವಿರ ರೂ.ನಗದು ಸಮೇತ 2.60 ಲಕ್ಷ ರೂ.ಶಿಷ್ಯವೇತನ ನೀಡಲಾಗುತ್ತದೆ.ಪ್ರತಿಭಾನ್ವಿತ 20 ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತ ಶಿಕ್ಷಣ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ್ ಬಿ.ಮಠ ಮಾಹಿತಿ ನೀಡಿದರು.

ಪರೀಕ್ಷೆಗೆ ಸಂಪರ್ಕ : ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಲು ವಿದ್ಯಾರ್ಥಿ ಹೆಸರು-ಶಾಲೆ ಹೆಸರು-ವಿಳಾಸ-ಮೊಬೈಲ್ ಸಂಖ್ಯೆ ಟೈಪ್ ಮಾಡಿ ಮೊ.9686906101ಗೆ ಎಸ್.ಎಂ.ಎಸ್ ಮಾಡಬಹುದಾಗಿದೆ.

ಕಳೆದ ಐದು ವರ್ಷಗಳಲ್ಲಿ ನಮ್ಮ ಸಂಸ್ಥೆಯಲ್ಲಿ ಓದಿದ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡು ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಕೆಲವರು ಇಂಜಿನಿಯರಿAಗ್ ಸೇರಿದಂತೆ ಇನ್ನುಳಿದ ಸ್ಪರ್ಧಾತ್ಮಕ ಕೋರ್ಸ್ಗಳಲ್ಲಿ ಆಯ್ಕೆಯಾಗಿದ್ದಾರೆ.ನಮ್ಮಲ್ಲಿ ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡುತ್ತಿದ್ದೇವೆ.
–ಬಿ.ಜಿ.ಮಠ, ಅಧ್ಯಕ್ಷರು, ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆ,ನಾಗರಬೆಟ್ಟ

Latest News

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು‌‌ ಮೂರು‌ ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು‌ ಅಧಿಕಾರಿಗಳಿಗೆ‌ ಸೂಚಿಸಿದರು.‌ ಕೃಷಿ, ತೋಟಗಾರಿಕೆ ಹಾಗೂ‌ ಕಂದಾಯ ಇಲಾಖೆ‌ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ‌ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ‌ ನೀಡಿದರು. ಕಂದಾಯ, ಕೃಷಿ ಹಾಗೂ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು. ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಬೈದವರು,ಹೊಗಳಿದವರನ್ನು ಅಪ್ಪಿಕೊಳ್ಳುವ ಸಮಾಜ ಕುರುಬ ಸಮಾಜವಾಗಿದೆ.ಅತೀ ಹೆಚ್ಚು ಭಕ್ತಿಯಿಂದ ನಡೆದುಕೊಳ್ಳುವ ಸಮಾಜವೂ ಕುರುಬ ಸಮಾಜವಾಗಿದೆ.ನಿಮ್ಮ