60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ ನೀಡಿ ಹೃದಯವೈಶಾಲ್ಯತೆ ತೋರಿದ್ದಾರೆ.ಅಲ್ಲದೇ ಕಷ್ಟ ಎಂದು ಬಂದ ಅತ್ಯಂತ ಕಡು ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಯೋಜನೆಯಡಿ ಉಚಿತವಾಗಿ ಓದಿಸುವ ಕಾರ್ಯ ಮಾಡಿದ್ದಾರೆ.

ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ : ಏ.3 ರಂದು ಬೆಳಗ್ಗೆ 11ಕ್ಕೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣ ಬಳಿ ಇರುವ ಎಕ್ಸಪರ್ಟ್ ಕಾಲೇಜು ಆವರಣದಲ್ಲಿ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯನ್ನು ಪ್ರಸಕ್ತ ಎಸ್.ಎಸ್.ಎಲ್.ಸಿ(ಎಸ್.ಎಸ್.ಎಲ್.ಸಿ/ಸಿಬಿಎಸ್‌ಇ/ಐಸಿಎಸ್‌ಸಿ) ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ.

ಬಹುಮಾನದ ವಿವರ : ಪ್ರಥಮ ಬಹುಮಾನ ಗಳಿಸುವ ವಿದ್ಯಾರ್ಥಿಗೆ 25 ಸಾವಿರ ರೂ.ನಗದು ಸಮೇತ 2.80 ಲಕ್ಷ ರೂ.ಶಿಷ್ಯವೇತನ, ದ್ವಿತೀಯ ಬಹುಮಾನ ಗಳಿಸುವ ವಿದ್ಯಾರ್ಥಿಗೆ 20 ಸಾವಿರ ರೂ.ನಗದು À ಸಮೇತ 2.75 ಲಕ್ಷ ರೂ.ಶಿಷ್ಯವೇತನ, ತೃತೀಯ ಬಹುಮಾನ ಗಳಿಸುವ ವಿದ್ಯಾರ್ಥಿಗೆ 15 ಸಾವಿರ ರೂ.ನಗದು ಸಮೇತ 2.70 ಲಕ್ಷ ರೂ.ಶಿಷ್ಯವೇತನ,ನಾಲ್ಕನೇ ಬಹುಮಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 10 ಸಾವಿರ ರೂ.ನಗದು ಸಮೇತ 2.65 ಲಕ್ಷ ರೂ.ಶಿಷ್ಯವೇತನ,ಐದನೇ ಬಹುಮಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 5ಸಾವಿರ ರೂ.ನಗದು ಸಮೇತ 2.60 ಲಕ್ಷ ರೂ.ಶಿಷ್ಯವೇತನ ನೀಡಲಾಗುತ್ತದೆ.ಪ್ರತಿಭಾನ್ವಿತ 20 ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತ ಶಿಕ್ಷಣ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ್ ಬಿ.ಮಠ ಮಾಹಿತಿ ನೀಡಿದರು.

ಪರೀಕ್ಷೆಗೆ ಸಂಪರ್ಕ : ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಲು ವಿದ್ಯಾರ್ಥಿ ಹೆಸರು-ಶಾಲೆ ಹೆಸರು-ವಿಳಾಸ-ಮೊಬೈಲ್ ಸಂಖ್ಯೆ ಟೈಪ್ ಮಾಡಿ ಮೊ.9686906101ಗೆ ಎಸ್.ಎಂ.ಎಸ್ ಮಾಡಬಹುದಾಗಿದೆ.

ಕಳೆದ ಐದು ವರ್ಷಗಳಲ್ಲಿ ನಮ್ಮ ಸಂಸ್ಥೆಯಲ್ಲಿ ಓದಿದ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡು ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಕೆಲವರು ಇಂಜಿನಿಯರಿAಗ್ ಸೇರಿದಂತೆ ಇನ್ನುಳಿದ ಸ್ಪರ್ಧಾತ್ಮಕ ಕೋರ್ಸ್ಗಳಲ್ಲಿ ಆಯ್ಕೆಯಾಗಿದ್ದಾರೆ.ನಮ್ಮಲ್ಲಿ ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡುತ್ತಿದ್ದೇವೆ.
–ಬಿ.ಜಿ.ಮಠ, ಅಧ್ಯಕ್ಷರು, ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆ,ನಾಗರಬೆಟ್ಟ

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,