60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ ನೀಡಿ ಹೃದಯವೈಶಾಲ್ಯತೆ ತೋರಿದ್ದಾರೆ.ಅಲ್ಲದೇ ಕಷ್ಟ ಎಂದು ಬಂದ ಅತ್ಯಂತ ಕಡು ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಯೋಜನೆಯಡಿ ಉಚಿತವಾಗಿ ಓದಿಸುವ ಕಾರ್ಯ ಮಾಡಿದ್ದಾರೆ.

ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ : ಏ.3 ರಂದು ಬೆಳಗ್ಗೆ 11ಕ್ಕೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣ ಬಳಿ ಇರುವ ಎಕ್ಸಪರ್ಟ್ ಕಾಲೇಜು ಆವರಣದಲ್ಲಿ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯನ್ನು ಪ್ರಸಕ್ತ ಎಸ್.ಎಸ್.ಎಲ್.ಸಿ(ಎಸ್.ಎಸ್.ಎಲ್.ಸಿ/ಸಿಬಿಎಸ್‌ಇ/ಐಸಿಎಸ್‌ಸಿ) ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ.

ಬಹುಮಾನದ ವಿವರ : ಪ್ರಥಮ ಬಹುಮಾನ ಗಳಿಸುವ ವಿದ್ಯಾರ್ಥಿಗೆ 25 ಸಾವಿರ ರೂ.ನಗದು ಸಮೇತ 2.80 ಲಕ್ಷ ರೂ.ಶಿಷ್ಯವೇತನ, ದ್ವಿತೀಯ ಬಹುಮಾನ ಗಳಿಸುವ ವಿದ್ಯಾರ್ಥಿಗೆ 20 ಸಾವಿರ ರೂ.ನಗದು À ಸಮೇತ 2.75 ಲಕ್ಷ ರೂ.ಶಿಷ್ಯವೇತನ, ತೃತೀಯ ಬಹುಮಾನ ಗಳಿಸುವ ವಿದ್ಯಾರ್ಥಿಗೆ 15 ಸಾವಿರ ರೂ.ನಗದು ಸಮೇತ 2.70 ಲಕ್ಷ ರೂ.ಶಿಷ್ಯವೇತನ,ನಾಲ್ಕನೇ ಬಹುಮಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 10 ಸಾವಿರ ರೂ.ನಗದು ಸಮೇತ 2.65 ಲಕ್ಷ ರೂ.ಶಿಷ್ಯವೇತನ,ಐದನೇ ಬಹುಮಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 5ಸಾವಿರ ರೂ.ನಗದು ಸಮೇತ 2.60 ಲಕ್ಷ ರೂ.ಶಿಷ್ಯವೇತನ ನೀಡಲಾಗುತ್ತದೆ.ಪ್ರತಿಭಾನ್ವಿತ 20 ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತ ಶಿಕ್ಷಣ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ್ ಬಿ.ಮಠ ಮಾಹಿತಿ ನೀಡಿದರು.

ಪರೀಕ್ಷೆಗೆ ಸಂಪರ್ಕ : ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಲು ವಿದ್ಯಾರ್ಥಿ ಹೆಸರು-ಶಾಲೆ ಹೆಸರು-ವಿಳಾಸ-ಮೊಬೈಲ್ ಸಂಖ್ಯೆ ಟೈಪ್ ಮಾಡಿ ಮೊ.9686906101ಗೆ ಎಸ್.ಎಂ.ಎಸ್ ಮಾಡಬಹುದಾಗಿದೆ.

ಕಳೆದ ಐದು ವರ್ಷಗಳಲ್ಲಿ ನಮ್ಮ ಸಂಸ್ಥೆಯಲ್ಲಿ ಓದಿದ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡು ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಕೆಲವರು ಇಂಜಿನಿಯರಿAಗ್ ಸೇರಿದಂತೆ ಇನ್ನುಳಿದ ಸ್ಪರ್ಧಾತ್ಮಕ ಕೋರ್ಸ್ಗಳಲ್ಲಿ ಆಯ್ಕೆಯಾಗಿದ್ದಾರೆ.ನಮ್ಮಲ್ಲಿ ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡುತ್ತಿದ್ದೇವೆ.
–ಬಿ.ಜಿ.ಮಠ, ಅಧ್ಯಕ್ಷರು, ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆ,ನಾಗರಬೆಟ್ಟ

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ