Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್.

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ