Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮೇಲೆ ಹಣ ದುರುಪಯೋಗದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅವರಿಗೆ ಸರ್ಕಾರ ಕೊಟ್ಟಿರುವ ಸ್ಥಾನಮಾನಗಳನ್ನು ಹಿಂಪಡೆದುಕೊoಡು ತನಿಖೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲ್ಲೂಕು ಘಟಕದಿಂದ ರಾಜ್ಯಪಾಲರು,ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಪದಾಧಿಕಾರಿಗಳು, ಶಿರಸ್ತೇದಾರ ಎಂ.ಎ.ಬಾಗೇವಾಡಿ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ ಸಂಸ್ಥೆಯಾಗಿದೆ.ಆಯ್ಕೆಯಾಗಿರುವ ಎಲ್ಲ ಸದಸ್ಯರು ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಉದ್ಯಮಿ ಅಯೂಬ್ ಮನಿಯಾರ್ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಹಾಲ್‌ನಲ್ಲಿ ಮಂಗಳವಾರ ಅಂಜುಮನ್ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಅಂಜುಮನ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಸ್ಥೆಗೆ ಯುವ ಉತ್ಸಾಹಿ ಸದಸ್ಯರು ಆಯ್ಕೆಯಾಗಿದ್ದೀರಿ.ಅಂಜುಮನ್ ಸಂಸ್ಥೆಗೆ ಇದ್ದ