Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು