Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು ತಗೆಯುವುದು ವಿದ್ಯಾರ್ಥಿಗಳಾದ ನಿಮ್ಮ ಕೈಯ್ಯಲ್ಲಿದೆ.ವಿದ್ಯೆ ಶಿಖರವೇರಿ ಗರ್ವದ ಮೇಲೆ ಕೂರಬಾರದು.ಹಣದಿಂದ ಯಾವುತ್ತೂ ಶಿಕ್ಷಣವನ್ನು ಅಳೆಯಬಾರದು ಎಂದು ಕಕ್ಕೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಯ್ಯ ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಬೀದರನ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ-2026 ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸ್ಕಾಲರ್‌ಶಿಪ್ ಪರೀಕ್ಷೆಯು ಮೂರು ಕೋಟಿ ರೂ.ವೆಚ್ಚದ್ದಾಗಿದ್ದು ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಸ್ಕಾಲರ್‌ಶಿಪ್ ವಿವರ : ಪರೀಕ್ಷೆಯಲ್ಲಿ ಪ್ರಥಮ 1-20ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ 3.80