Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ ಅವರು, ರಾಜ್ಯದ 30 ಸಾವಿರ ಗುತ್ತಿಗೆದಾರರು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಆರ್.ಮಂಜುನಾಥ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಇನ್ನೀತರ

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಅಸುನೀಗಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸಮೀಪದಲ್ಲಿ ಶನಿವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಮುದ್ದೇಬಿಹಾಳ ಪಟ್ಟಣದ ಶಾಂತಲಾ ಪ್ರೌಢಶಾಲೆಯ ವಿದ್ಯಾರ್ಥಿ, ತಾಲ್ಲೂಕಿನ ಗೋನಾಳ ಪಿ.ಎನ್. ಗ್ರಾಮದ ನಿವಾಸಿ ಮಹೇಶ ಬಸಪ್ಪ ಮಾದರ(16)ಎಂದು ಗುರುತಿಸಲಾಗಿದೆ.