Channapatna by-election: Explosive bomb exploded by C.P. Yogeshwar

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಟಿಕೆಟ್ (Channapattana by election) ಕಾವು ಏರುತ್ತಿದ್ದು, ಇದೇ ವಿಚಾರವಾಗಿ ಶುಕ್ರವಾರ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಈ ವೇಳೆ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರು ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರುವ ಸಾಧ್ಯತೆಯನ್ನು ರಾಜ್ಯದ ನಾಯಕರು ತಳ್ಳಿಹಾಕಿದ್ದಾರೆ. ಅವರು ಬಿಜೆಪಿಯಲ್ಲೇ ಉಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಶಾಸಕರಾದ ಅರವಿಂದ್ ಬೆಲ್ಲದ್, ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ಅವರನ್ನೊಳಗೊಂಡ ನಿಯೋಗ ಜೆ.ಪಿ.ನಡ್ಡಾ ಹಾಗೂ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಉಪಚುನಾವಣೆ ಕುರಿತು ಚರ್ಚಿಸಿತು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಆರ್.ಅಶೋಕ್ ಮಾತನಾಡಿ, ಗುರುವಾರ ರಾತ್ರಿ ಚನ್ನಪಟ್ಟಣ ಉಪಚುನಾವಣೆ ಕುರಿತು ಸುದೀರ್ಘ ಚರ್ಚೆಯಾಗಿದೆ. ಶುಕ್ರವಾರ ಬಿ.ಎಲ್. ಸಂತೋಷ್ ಮತ್ತು ನಡ್ಡಾ ಅವರೊಂದಿಗೂ ಮಾತುಕತೆ ನಡೆಸಿದ್ದೇವೆ. ಟಿಕೆಟ್ ಬಗ್ಗೆ ಎನ್‌ಡಿಎ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.

ಇದೇ ವೇಳೆ ಯೋಗೇಶ್ವರ್ ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆಂಬ ಸುದ್ದಿಗಳ ಕುರಿತು ಪ್ರತಿಕ್ರಿಯಿಸಿದ ಅವರು ಅಂಥ ಸಾಧ್ಯತೆಗಳನ್ನು ತಳ್ಳಿಹಾಕಿದರು. ಯೋಗೇಶ್ವ‌ರ್ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಊಹಾಪೋಹ. ಅವರು ಬಿಜೆಪಿಯಲ್ಲೇ ಇರಲಿದ್ದಾರೆ. (Channapattana by election)

ಟಿಕೆಟ್ ವಿಚಾರವಾಗಿ ಜೆಡಿಎಸ್ ವರಿಷ್ಠ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ನಮ್ಮ
ವರಿಷ್ಠರು ಸೇರಿ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಡಿಕೆಶಿಗೆ ಟಾಂಗ್

ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ ಅಶೋಕ್, ಅವರು ಆಚನ್ನಪಟ್ಟಣಕ್ಕೆ ಹೋಗಿ ಜನರ ಕಿವಿ ಮೇಲೆ ಹೂವಿಡಲು ಸಾಧ್ಯವಿಲ್ಲ. ಕ್ಷೇತ್ರದ ಜನರು ಜಾಣರಿದ್ದಾರೆ. ಡಿ.ಕೆ.ಶಿವಕುಮಾರ್ ವಿಸಿಟಿಂಗ್ ಡಾಕ್ಟರ್ ಇದ್ದಂತೆ. ಚುನಾವಣೆ ಇದ್ದಾಗ ಮಾತ್ರ ಕ್ಷೇತ್ರಕ್ಕೆ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ