ರಥದ ನಿರ್ಮಾಣಕ್ಕೆ ಚಾಲನೆ : ಕುಂಟೋಜಿ ಬಸವೇಶ್ವರ ದೇವಸ್ಥಾನಕ್ಕೆ ಕೊಪ್ಪಳದ ರಥ

ರಥದ ನಿರ್ಮಾಣಕ್ಕೆ ಚಾಲನೆ : ಕುಂಟೋಜಿ ಬಸವೇಶ್ವರ ದೇವಸ್ಥಾನಕ್ಕೆ ಕೊಪ್ಪಳದ ರಥ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸಾಗವಾನಿ ಕಟ್ಟಿಗೆಯ 25 ಅಡಿ ಎತ್ತರದ ರಥದ ನಿರ್ಮಾಣ ಕಾರ್ಯಕ್ಕೆ ಬುಧವಾರ ದೇವಸ್ಥಾನದ ಕಮೀಟಿಯವರು, ದೈವದವರು ಕೊಪ್ಪಳದಲ್ಲಿ ಚಾಲನೆ ನೀಡಿದರು.

ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ತೇರು ನಿರ್ಮಾಣ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಶಿವಾಚಾರ್ಯರು ತಿಳಿಸಿದರು.
ಕೊಪ್ಪಳದ ರಥಶಿಲ್ಪಿ ಮಲ್ಲಪ್ಪ ಬಡಿಗೇರ ನೇತೃತ್ವದಲ್ಲಿರುವ ಎಂ.ಜಿ.ರಥಶಿಲ್ಪಿ ಕಲಾಕೇಂದ್ರದಲ್ಲಿ ತೇರಿನ ಕಟ್ಟಿಗೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತೇರು ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗವಿಸಿದ್ದೇಶ್ವರ ಮಹಾಸ್ವಾಮಿಯವರು ರಥದ ಲೋಕಾರ್ಪಣೆ ಸಮಾರಂಭದಲ್ಲಿ ಉಪಸ್ಥಿತರಿರಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಮಾತನಾಡಿ, 4 ಏಕಶಿಲೆಯ ಬೃಹತ್ ಚಕ್ರಗಳ ಮೇಲೆ 3 ಪೀಠಗಳುಳ್ಳ 25 ಅಡಿ ಎತ್ತರದ ಭವ್ಯ ತೇರು ಮುಂದಿನ ವರ್ಷ 2025ರ ಶ್ರಾವಣ ಮಾಸಕ್ಕೂ ಮುನ್ನ ಪೂರ್ಣಗೊಳ್ಳಲಿದ್ದು ಶ್ರಾವಣ ಮಾಸದ ಕೊನೆ ಮಂಗಳವಾರ ನಡೆಯಲಿರುವ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ನೂತನ ತೇರನ್ನು ಲೋಕಾರ್ಪಣೆಗೊಳಿಸಲಾಗುತ್ತದೆ ಎಂದರು.
ಗ್ರಾಮದ ಪ್ರಮುಖರಾದ ಶರಣು ಹಿರೇಮಠ,ಶಿವಪ್ಪ ಆರೇಶಂಕರ, ಮಾಜಿ ಸೈನಿಕ ನಾಗಲಿಂಗಯ್ಯ ಮಠ ಶಿವಲಿಂಗಪ್ಪ ಗಸ್ತಿಗಾರ, ಜುಮ್ಮಣ್ಣ ಹಿರೇಕುರುಬರ, ರಾಮಣ್ಣ ಹುಲಗಣಿ ಶಿವನಗೌಡ ಪಾಟೀಲ, ಕರಬಸ್ಸು ಬಿರಾದಾರ, ಎಂ.ಎಂ.ನಾಟೇಕಾರ, ಕಾಸಯ್ಯ ಮಠ, ಶಾಂತಗೌಡ ಬಿರಾದಾರ, ಸೋಮಣ್ಣ ಹೊಸಮನಿ, ಶ್ರೀಶೈಲ ಪಲ್ಲೇದ, ಊರ ದೈವಮಂಡಳಿಯವರು ಉಪಸ್ಥಿತರಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ