ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು.

ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಲಿಂ.ಯುಮುನಾಬಾಯಿ ಕಲಕೇರಿ, ದಿ.ಎಚ್.ಆರ್.ಕಲಕೇರಿ ಹಾಗೂ ಗಿರಿಜಾಬಾಯಿ ಕಲಕೇರಿ ಅವರ ಸ್ಮರಣಾರ್ಥ ಬುಧವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಣರು ಸಮಾಜದಲ್ಲಿ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಜೀವಂತ ಇರುವ ಅನಿಷ್ಟ ಆಚರಣೆಗಳನ್ನು ತೊಡೆದು ಹಾಕಲು ನಿತ್ಯವೂ ನಾವು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು.ದಿ.ಎಚ್.ಆರ್.ಕಲಕೇರಿ ಅವರು ಶಿಕ್ಷಕರಾಗಿದ್ದುಕೊಂಡು ಶರಣ ತತ್ವವನ್ನು ಅನುಸರಿಸಿದವರು.ಅವರ ಪುತ್ರ ಐಎಎಸ್ ಉತ್ತೀರ್ಣರಾಗಿ ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರಿಗೆ ದೈವ ಕರುಣಿಸಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕ ಸಿ.ಜಿ.ನಾಗರಾಳ, ಆಯುರ್ವೇದ ವೈದ್ಯ ರಾಜಶೇಖರ ಚಿರ್ಚನಕಲ್ ಮಾತನಾಡಿ, ಕಲಕೇರಿ ಅವರ ಜೀವನ ಹಾಗೂ ಆಯುರ್ವೇದದಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸಿದರು.ಮಡಿವಾಳೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ್, ಕಾರ್ಯದರ್ಶಿ ಜಿ.ಎಸ್.ಕೋರಿ, ಬಾಪುಗೌಡ ಪಾಟೀಲ್, ಮಲ್ಲಿಕಾರ್ಜುನ ಕೋರಿ,ಮಡಿವಾಳಪ್ಪಗೌಡ ಬಿರಾದಾರ,ಶಂಕರಗೌಡ ಬಿರಾದಾರ, ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮಹಾದೇವಿ ಕಂಠಿ, ಭಾರತಿ ಪಾಟೀಲ್ ,ಶಾಲೆಯ ಮಖ್ಯಗುರು ರಮೇಶ ಮೂಲಿಮನಿ ಮೊದಲಾದವರು ಇದ್ದರು.ನಾನಾಗೌಡ ಕೊಣ್ಣೂರ ಬಸವಭಾವ ಪೂಜೆ ಮಾಡಿದರು.ಎಸ್.ಎ.ಬೇವಿನಗಿಡದ ಸ್ವಾಗತಿಸಿದರು.

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.