ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು.

ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಲಿಂ.ಯುಮುನಾಬಾಯಿ ಕಲಕೇರಿ, ದಿ.ಎಚ್.ಆರ್.ಕಲಕೇರಿ ಹಾಗೂ ಗಿರಿಜಾಬಾಯಿ ಕಲಕೇರಿ ಅವರ ಸ್ಮರಣಾರ್ಥ ಬುಧವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಣರು ಸಮಾಜದಲ್ಲಿ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಜೀವಂತ ಇರುವ ಅನಿಷ್ಟ ಆಚರಣೆಗಳನ್ನು ತೊಡೆದು ಹಾಕಲು ನಿತ್ಯವೂ ನಾವು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು.ದಿ.ಎಚ್.ಆರ್.ಕಲಕೇರಿ ಅವರು ಶಿಕ್ಷಕರಾಗಿದ್ದುಕೊಂಡು ಶರಣ ತತ್ವವನ್ನು ಅನುಸರಿಸಿದವರು.ಅವರ ಪುತ್ರ ಐಎಎಸ್ ಉತ್ತೀರ್ಣರಾಗಿ ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರಿಗೆ ದೈವ ಕರುಣಿಸಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕ ಸಿ.ಜಿ.ನಾಗರಾಳ, ಆಯುರ್ವೇದ ವೈದ್ಯ ರಾಜಶೇಖರ ಚಿರ್ಚನಕಲ್ ಮಾತನಾಡಿ, ಕಲಕೇರಿ ಅವರ ಜೀವನ ಹಾಗೂ ಆಯುರ್ವೇದದಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸಿದರು.ಮಡಿವಾಳೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ್, ಕಾರ್ಯದರ್ಶಿ ಜಿ.ಎಸ್.ಕೋರಿ, ಬಾಪುಗೌಡ ಪಾಟೀಲ್, ಮಲ್ಲಿಕಾರ್ಜುನ ಕೋರಿ,ಮಡಿವಾಳಪ್ಪಗೌಡ ಬಿರಾದಾರ,ಶಂಕರಗೌಡ ಬಿರಾದಾರ, ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮಹಾದೇವಿ ಕಂಠಿ, ಭಾರತಿ ಪಾಟೀಲ್ ,ಶಾಲೆಯ ಮಖ್ಯಗುರು ರಮೇಶ ಮೂಲಿಮನಿ ಮೊದಲಾದವರು ಇದ್ದರು.ನಾನಾಗೌಡ ಕೊಣ್ಣೂರ ಬಸವಭಾವ ಪೂಜೆ ಮಾಡಿದರು.ಎಸ್.ಎ.ಬೇವಿನಗಿಡದ ಸ್ವಾಗತಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ